Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಖಾದರ್ ಗೆ ಒಲಿದ ಸಭಾಧ್ಯಕ್ಷತೆ ಹುದ್ದೆ

 

ಬೆಂಗಳೂರು:
ಕಾಂಗ್ರೆಸ್ ಪಕ್ಷದ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಈ ಸಲ ಸಭಾಧ್ಯಕ್ಷ ಹುದ್ದೆ ಬಹುತೇಕ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ.
ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು‌ ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ

ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಲಹೆಯಂತೆ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಖಾದರ್ ಒಪ್ಪಿದ್ದಾರೆ.

ಹೆಸರು: ಯು ಟಿ ಅಬ್ದುಲ್ ಖಾದರ್ ಫರೀದ್ ಬಿಎ,ಎಲ್‌ಎಲ್‌ಬಿ

ತಂದೆಯ ಹೆಸರು: ಯು ಟಿ ಫರೀದ್ ಬಿಎ,ಎಲ್‌ಎಲ್‌ಬಿ (1972,1978,1999,2004 ನಾಲ್ಕು ಬಾರಿ ಶಾಸಕರು)

ತಾಯಿಯ ಹೆಸರು : ಯು ಟಿ ನಸೀಮಾ ಫರೀದ್

ಜನ್ಮ ದಿನಾಂಕ : 12-10-1969

ಶೈಕ್ಷಣಿಕ ವಿವರ-

ಯು ಟಿ ಖಾದರ್ ರವರು ತನ್ನಎಲ್‌ಕೆಜಿ ಶಿಕ್ಷಣವನ್ನು ರೋಶನಿ ನಿಲಯದಲ್ಲಿ,ಒಂದರಿಂದ ನಾಲ್ಕನೇ ತರಗತಿ ವರೆಗೆ ಸೈನ್ಟ್ ಜೆರೋಝ,ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣದ ವರೆಗೆ ಸೈನ್ಟ್ ಅಲೋಶಿಯಸ್ ನಲ್ಲಿ ,ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಬಿಎ,ಎಲ್‌ಎಲ್‌ಬಿ ಪದವಿ ಶಿಕ್ಷಣ ಮುಗಿಸಿದರು.

ಹವ್ಯಾಸ : ಬೈಕ್ ಹಾಗೂ ಕಾರ್ ರೇಸ್‌ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ್ದರು.

ಕ್ರೀಡೆಯಲ್ಲಿ ಕೂಡ ಆಸಕ್ತಿ ಹೊಂದಿದ್ದು ಕ್ರಿಕೆಟ್,ಫೂಟ್ಬಾಲ್,ವಾಲಿಬಾಲ್,ಹಾಕಿ,ಟೆನ್ನಿಸ್ ಹಾಗೂ ಇತರ ಕ್ರೀಡೆಗಳನ್ನು ಆಡುತ್ತಿದ್ದರು.

ರಾಜಕೀಯ ವಿವರ

1990ರಲ್ಲಿ ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,1994 ರಿಂದ 1999ರ ವರೆಗೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ,1999 ರಿಂದ 2001 ರ ವರೆಗೆ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2003ರಲ್ಲಿ ಘಟಪ್ರಭದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ,2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು.ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಚುನಾವಣಾ ರಾಜಕೀಯ

2008 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008,2013,2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು.ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು.ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ,ಬೈಕ್ ಅಂಬ್ಯುಲೆನ್ಸ್,108,ಆರೋಗ್ಯಶ್ರೀ,ದಂತ ಭಾಗ್ಯ,ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ,ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿ ಕೊಂಡಿದ್ದರು.

ನಂತರ 2016 ರಿಂದ 2018 ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ,ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದರು.ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018ರ ಮೈತ್ರಿ ಸರಕಾರದಲ್ಲಿ ನಗರಾಭಿವ್ರಿದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿ ಯಶಶ್ವಿಯಾದರು.ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ,ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ,ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ,ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2021ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರವರೆಗೆ ಕಾರ್ಯ ನಿರ್ವಹಿಸಿ ಪ್ರತೀ ಹಂತದಲ್ಲೂ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸೈ ಎನಿಸಿಕೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ