Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ

ಬೆಂಗಳೂರು:
ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಹೋಟೆಲ್‌ ಅಶೋಕದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು, ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಿನಿಮಾಗೆ ಎಂಟ್ರಿ ಕೊಟ್ಟಾಗ ಯಾರೂ ಗಾಡ್ ಫಾದರ್ ಇರಲಿಲ್ಲ. ಕಷ್ಟದ ದಿನಗಳಲ್ಲಿ ಬೊಮ್ಮಾಯಿಯವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಇಲ್ಲಿ ರಾಜಕೀಯದ ಪ್ರಶ್ನೆ ಬರುವುದಿಲ್ಲ, ಬೊಮ್ಮಾಯಿ ಅವರನ್ನು ತಮ್ಮ ಗಾಡ್ ಫಾದರ್ ಎಂದು ಹೇಳಿದ ಅವರು, ನಾನು ಅವರನ್ನು ಬೆಂಬಲಿಸುತ್ತೇನೆ ಹಾಗೂ ಅವರು ಸೂಚಿಸುವ ಎಲ್ಲರಿಗೂ ಬೆಂಬಲ ನೀಡುತ್ತೇನೆ ಎಂದು ಅವರು ಹೇಳಿದರು.
ಕಷ್ಟದ ದಿನಗಳಲ್ಲಿ ಬೆಂಬಲಕ್ಕೆ ಕೆಲವರ ಪೈಕಿ ಬಸವರಾಜ ಬೊಮ್ಮಾಯಿ‌ ಅವರು ಒಬ್ಬರು ಸುದೀಪ್‌ ಹೇಳಿದ್ದಾರೆ. ಪ್ರಚಾರಕ್ಕೆ ಎಲ್ಲ ಕಡೆ ಹೋಗಲು ಆಗಲ್ಲ. ಬೊಮ್ಮಾಯಿ ಅವರು ಇಂಥಲ್ಲಿ ಪ್ರಚೃ ಮಾಡಿ ಎಂದರೆ ಮಾಡುತ್ತೇನೆ. ಎಲ್ಲರನ್ನೂ ಮೆಚ್ವಿಸುವ ಉದ್ದೇಶವಿದ್ದರೆ ಇಲ್ಲಿ‌ ಬರುತ್ತಿರಲಿಲ್ಲ. ಬಸವರಾಜ ಬೊಮ್ಮಾಯಿ ಯಾವ ಪಕ್ಷದಲ್ಲಿ ಇದ್ದರೂ ಅವರ ಪರವಾಗಿ ನಿಲ್ಲುತ್ತಿದ್ದೆ. ನನ್ನ ಕಷ್ಟದ ದಿನಗಳಲ್ಲಿ ಯಾರಾದರೂ ನನ್ನ ಪರವಾಗಿ ನಿಂತಿದ್ದರೆ ನಾನು‌ ಅವರ ಪರವಾಗಿ‌ ನಿಲ್ಲುತ್ತಿದ್ದೆ ಎಂದು ಅವರು ತಿಳಿಸಿದರು.

ನಾನು ಚುನಾವಣೆಗೆ ನಿಲ್ಲುತ್ತಿಲ್ಲ, ಎಂದು ಸ್ಪಷ್ಟಪಡಿಸಿದ ಸುದೀಪ್‌ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಬೇಕಾದ ವ್ಯಕ್ತಿಗಳ ಪರವಾಗಿ ಅವರು ಹೇಳಿದರೆ ಪ್ರಚಾರ ನಡೆಸುತ್ತೇನೆ. ನಾನು ವ್ಯಕ್ತಿಗೆ ಬೆಂಬಲ ನೀಡುತ್ತಿದ್ದೇನೆಯೇ ಹೊರತು ಪಕ್ಷಕ್ಕಲ್ಲ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಾಧ್ಯಮಗಳಲ್ಲಿ ಬಂದ ಸುದ್ದಿ ಸತ್ಯವಾಗಿದೆ. ಕಿಚ್ಚ ಸುದೀಪ್ ಜೊತೆಗೆ ಆತ್ಮೀಯ ಸ್ನೇಹವಿದೆ. ಅವರು ತಮ್ಮ ನಿಲುವನ್ನು ಪ್ರಕಟ ಮಾಡುತ್ತಾರೆ ಎಂದ ಸಿಎಂ ಬಸವರಾಜ ಬೊಮ್ಮಾಯಿ, ಸುದೀಪ್ ರಾಜಕಾರಣದಲ್ಲಿ ಇಲ್ಲ, ಎಲ್ಲರಿಗೂ ಬೇಕಾದವರು ಆಗಿದ್ದಾರೆ ಎಂದರು.
ಕಿಚ್ಚ ಸುದೀಪ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ತನಗೆ ಮತ್ತು ತಾನು ಇರುವ ಪಕ್ಷವನ್ನು ಬೆಂಬಲಿಸಲು ಬಂದಿದ್ದಾರೆ. ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಸುದೀಪ್ ಹಾಗೂ ನನ್ನ ಸಂಬಂಧಕ್ಕೆ ಗೌರವ ಕೊಡಿ. ಅವರ ಬಳಿ ಮಾತುಕತೆ ನಡೆಸಿದ್ದೇನೆ. ಪಕ್ಷಕ್ಕೆ ಸೇರ್ಪಡೆ ಆಗದೇ ಇದ್ದರೂ ಪಕ್ಷಕ್ಕೆ ಪ್ರಚಾರದ ಅಗತ್ಯ ಇದೆ. ನಿಮಗಾಗಿ ಪ್ರಚಾರ ಮಾಡಲು ತಯಾರಿದ್ದೇನೆ ಅವರು ಹೇಳಿದರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ