Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ದೊಡ್ಡಬಳ್ಳಾಪುರಕ್ಕೆ ಕೊಂಗಾಡಿಯಪ್ಪ ನವರ ಕೊಡುಗೆ ಅಪಾರ-ಎಂ. ಜಿ. ಶ್ರೀನಿವಾಸ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಅಭಿವೃದ್ದಿಗೆ  ಲೋಕಸೇವಾನಿರತ ಡಿ. ಕೊಂಗಾಡಿಯಪ್ಪನವರ ಕೊಡುಗೆ ಅಪಾರವಾಗಿದ್ದು
, ಇಂತಹ ಮಹನೀಯರ ಪುತ್ಥಳಿ ಸ್ಥಾಪನೆ ಶೀಘ್ರವಾಗಿ ನಗರಸಭೆ ಕಾರ್ಯಾಲಯದ ಮುಂಬಾಗ ಆಗಬೇಕಿದೆ. ಪುತ್ಥಳಿ ನಿರ್ಮಾಣದ ಅಂದಾಜ ವೆಚ್ಚ  ಕುರಿತು ನಗರಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಅನುಮೋದನೆ ದೊರೆಯಲಿದೆ ಎಂದು ದೇವಾಂಗ ಮಂಡಲಿ ಅಧ್ಯಕ್ಷ  ಹಾಗೂ ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಹೇಳಿದರು.

ಲೋಕಸೇವಾನಿರತ ಕೊಂಗಾಡಿಯಪ್ಪನವರ 166ನೇ ಜನ್ಮದಿನಾಚರಣೆ ಕಾರ್ಯಕ್ರಮ ಅಂಗವಾಗಿ ನಗರದ ಮುಖ್ಯರಸ್ತೆಯ ಮಾರುಕಟ್ಟೆಶಾಲೆಯ ಮುಂಭಾಗದಲ್ಲಿನ ಕೊಂಗಾಡಿಯಪ್ಪನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿ

ಕೊಂಗಾಡಿಯಪ್ಪನವರ ಪರಿಶ್ರಮದಿಂದಾಗಿ ನಮ್ಮ ಊರಿನಲ್ಲಿ ಅಂದಿನ ಕಾಲದಲ್ಲಿಯೇ ವಿದ್ಯುತ್, ಕೊಳವೆ ಬಾವಿಪ್ರೌಢಶಾಲೆ, ಆಸ್ಪತ್ರೆಪಶು ವೈದ್ಯಶಾಲೆ, ಕೈಮಗ್ಗ ಮತ್ತು  ಗೃಹ ಕೈಗಾರಿಕಾ ತರಬೇತಿ ಕೇಂದ್ರಗಳು ಸ್ಥಾಪನೆಯಾಗಿದ್ದವು.  ಅಧಿಕಾರಿಗಳ ಬಳಿಗೆ ತೆರಳಿ ಊರಿಗೆ ಆಗಬೇಕಾದ ಕೆಲಸಗಳನ್ನು ನಿವೇದನೆ ಮಾಡಿ ಆಗುವವರೆಗೂ ಬೆಂಬಿಡದೆ ಮಾಡಿಸುತ್ತಿದ್ದರು. ಕೊಂಗಾಡಿಯಪ್ಪನವರು ಊರಿನ ಯಾವ ಸಮಸ್ಯೆಯನ್ನಾಗಲೀ ಬಗೆಹರಿಸಲು ದುಡಿಯುತ್ತಿದ್ದರು. ಶಿಕ್ಷಣ, ಪರಿಸರ, ಸಮಾಜ ಸೇವೆಗಳಿಗೆ ಒತ್ತು ನೀಡಿದ್ದ ಅವರ ಬದುಕು ಹಾಗೂ ಜೀವನ ಕ್ರಮ ಇಂದಿನ ಪೀಳಿಗೆಗೆ ತಿಳಿಯಬೇಕು ಎಂದರು.

ನಗರಸಭೆ ಸದಸ್ಯತ. ನ. ಪ್ರಭುದೇವ್ ಮಾತನಾಡಿ ಕೊಂಗಾಡಿಯಪ್ಪನವರ  ನಿಸ್ವಾರ್ಥ ಸೇವೆ, ಶ್ರಮದಿಂದಾಗಿ ಇಂದು ದೊಡ್ಡಬಳ್ಳಾಪುರ ರಾಜ್ಯದಲ್ಲಿಯೇ ಹೆಸರುವಾಸಿಯಾಗಲು ಕಾರಣವಾಗಿದೆ. ನೇಕಾರಿಕೆಗೆ ಆಸರೆಯಾಗಿರುವ ವಿದ್ಯುತ್, ಯಾಂತ್ರಿಕ ತರಬೇತಿ ಕೇಂದ್ರ ಬರಲು ಕೊಂಗಾಡಿಯಪ್ಪನವರು ಕಾರಣರಾಗಿದ್ದರು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಎಂ. ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಆರ್.ಕಾರ್ತಿಕೇಶ್ವರ, ದೇವಾಂಗ ಮಂಡಲಿ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಎನ್.ಎಸ್.ಚಿಕ್ಕಣ್ಣ, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್, ಸೇರಿದಂತೆ ನಗರಸಭೆ ಸದಸ್ಯರು, ದೇವಾಂಗ ಮಂಡಲಿ ನಿರ್ದೇಶಕರು ಭಾಗವಹಿಸಿದ್ದರು.

ನಗರಸಭೆಯಿಂದ ಕೊಂಗಾಡಿಯಪ್ಪ ಜಯಂತಿ ಆಚರಣೆ-
ನಗರಸಭೆ ವತಿಯಿಂದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪನವರ 166ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಂಜಯನಗರದಲ್ಲಿರುವ ಕೊಂಗಾಡಿಯಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.


ನಗರಸಭೆ ಉಪಾಧ್ಯಕ್ಷ ಎಂ. ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್,ಪೌರಾಯುಕ್ತ ಆರ್.ಕಾರ್ತಿಕೇಶ್ವರ, ನಗರಸಭೆ ಸದಸ್ಯೆ ಎಸ್. ಸುಧಾರಾಣಿ ಲಕ್ಷ್ಮೀನಾರಾಯಣ ಸೇರಿದಂತೆ ನಗರಸಭೆ ಸದಸ್ಯರು ಭಾಗವಹಿಸಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ