LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಹುದ್ದೆಗಳಿ ಭರ್ತಿಗೆ ಅರ್ಜಿ ಆಹ್ವಾನ.!

 

ಬೆಂಗಳೂರು: ಕರ್ನಾಟಕದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಪ್ರಕ್ರಿಯೆ ಆರಂಭಿಸಿದೆ.

ಮೂಲ ವೃಂದದ 342 ಹುದ್ದೆಗಳು ಹಾಗೂ ಬ್ಯಾಕ್‌ಲಾಗ್‌ನ 48 ಹುದ್ದೆಗಳು ಸೇರಿ ಒಟ್ಟು 400 ಹುದ್ದೆಗಳಿವೆ. ಈ ಹುದ್ದೆಗಳು ಗ್ರೂಪ್ ಎ ಹುದ್ದೆಗಳಾಗಿರುತ್ತವೆ.

ಆಗಸ್ಟ್ 12ರಂದು ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು ಸೆಪ್ಟೆಂಬರ್ 12ಕ್ಕೆ ಅಂತ್ಯವಾಗಲಿದೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ಪದವಿ ಪಡೆದು (B.V.Sc/B.V.Sc&AH) ಕರ್ನಾಟಕ ವೆಟೆರಿನರಿ ಕೌನ್ಸಿಲ್‌ನಲ್ಲಿ ನೋಂದಾಯಿಸಲ್ಪಟ್ಟ ಪುರುಷ, ಮಹಿಳೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ.

ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹600. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300. ಮಾಜಿ ಸೈನಿಕರಿಗೆ ₹50, ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 35. ಮೀಸಲು ವರ್ಗಗಳಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಕನ್ನಡ ಕಡ್ಡಾಯ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://kpsc.kar.nic.in/ ಗೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜುಬೆಂಗಳೂರು : HTT-40 ತರಬೇತಿ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ