LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

KSRTC ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್.! ಇಂದು ರಾಜ್ಯದ್ಯಂತ ಎಲ್ಲಡೆ ಜಾರಿ

ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಯಿಸಿದ ನಂತರ ಪಂಚ ಗ್ಯಾರಂಟಿ ಯೋಜನೆಗಳು (5 ಗ್ಯಾರಂಟಿ ಯೋಜನೆಗಳನ್ನು) ಜಾರಿಗೆ ತರಲಾಯಿತು. ಇದರಲ್ಲಿ ಒಂದಾದ ಶಕ್ತಿ ಯೋಜನೆಯಾಗಿದೆ, ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರು ತಮ್ಮ ಆರ್ಥಿಕ ಕೆಲಸಗಳಿಗೆ ಮತ್ತು ಇನ್ನಿತರ ಕೆಲಸಗಳಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ ಇದರಿಂದಾಗಿ ಮಹಿಳೆಯರಿಗೆ ಸಾಕಷ್ಟು ಸಹಾಯವಾಗಿದೆ.

ಶಕ್ತಿ ಯೋಜನೆಯನ್ನು ಜಾರಿಗೆ ತಂದಾಗಲಿಂದ ಸಾಕಷ್ಟು ರಾಜ್ಯದ ಸಾರಿಗೆ ಸಂಚಾರ ಇಲಾಖೆ ಮೇಲೆ ನಷ್ಟ ಉಂಟಾಗುತ್ತಿದೆ ಮತ್ತು ಬಸ್ಸುಗಳಲ್ಲಿ ಸಾಕಷ್ಟು ರಶ್ ಆಗುತ್ತಿದೆ ಹಾಗೂ ಟಿಕೆಟ್ ಕಳ್ಳಾಟ ಕೂಡ ನಡೆಯುತ್ತಿದೆ. ಎಂದು ರಸ್ತೆ ಸಾರಿಗೆ ಸಂಚಾರ ಇಲಾಖೆ ಹೇಳಿದೆ ಇದನ್ನು ತಡೆಯಲು ರಸ್ತೆ ಸಾರಿಗೆ ಸಂಚಾರ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್ ಬಿಡುಗಡೆ ಮಾಡಿದ್ದಾರೆ, ಇದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ. ಬಸ್ಗಳಲ್ಲಿ ಪ್ರಯಾಣಿಸುವ ಗಂಡಸರಿಗೆ ಮಹಿಳೆಯರ ಟಿಕೆಟ್ ನೀಡಿ ಹಣ ಪಡೆಯುವ ಮಾಹಿತಿ ಇಲಾಖೆಯ ಗಮನಕ್ಕೆ ಬಂದಿದ್ದು, ಇಂಥ ಎಲ್ಲಾ ಕ್ರಮಗಳನ್ನು ಸ್ಥಗಿತಗೊಳಿಸುವ ಸಲುವಾಗಿ ರಾಜ್ಯದ ರಸ್ತೆ ಸಾರಿಗೆ ಸಂಚಾರ ಇಲಾಖೆ ಹೊಸ ರೂಲ್ಸ್ ಅನ್ನು ಕೈಗೊಂಡಿದೆ.

ಇನ್ನು ಮೇಲೆ ಸ್ಮಾರ್ಟ್ ಕಾರ್ಡ್ ಬಿಡುಗಡೆ:

ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರ ಹೆಸರಿನಲ್ಲಿ ಗಂಡಸರಿಗೆ ಟಿಕೆಟ್ ನೀಡಿ ಹಣ ಪಡೆಯುವ ಕೆಲಸದಿಂದಾಗಿ ರಸ್ತೆ ಸಾರಿಗೆ ಸಂಚಾರ ಇಲಾಖೆಗೆ 100 ಕೋಟಿ ನಷ್ಟ ಉಂಟಾಗಿದೆ ಎಂದು ಇಲಾಖೆ ಹೇಳಿದೆ. ಇನ್ನು ಮುಂದೆ ಟಿಕೆಟ್ ಕಳ್ಳ ಸಾಗಾಣಿಕೆ ತಡೆಯಲು ರಸ್ತೆ ಸಾರಿಗೆ ಸಂಚಾರವು ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಿದೆ. ಇನ್ನು ಮುಂದೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಬೇಕಾಗಿದೆ. ಈ ಒಂದು ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಲು 16 ರಿಂದ 17 ರೂಪಾಯಿಯನ್ನು ಕಟ್ಟಬೇಕಾಗುತ್ತದೆ ಇನ್ನು ಈ ಒಂದು ರೂಲ್ಸ್, ಶೀಘ್ರದಲ್ಲೇ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಪಯೋಗವಾಗಲಿದೆ ಎಂದು ರಸ್ತೆ ಸಾರಿಗೆ ಸಂಚಾರ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿಯವರು ಹೇಳಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ