Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ

ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಎಪ್ಪತ್ತ್ತರ ದಶಕದಲ್ಲಿ ಲೋಕವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ಶಿವಣ್ಣ ಅವರು ಬಳಿಕ ಸಂಜೆವಾಣಿ ಪತ್ರಿಕೆಗೆ ಸೇರಿ 25 ವರ್ಷಗಳಿಗೂ ಹೆಚ್ಚು ಕಾಲ ವರದಿಗಾರಿಕೆ ಮಾಡಿದವರು. ರಾಜಕೀಯ ವರದಿಗಾರಿಕೆಯಲ್ಲಿಯೂ ಪರಿಣಿತರಾಗಿದ್ದವರು. ಆ ಕಾಲಘಟ್ಟದಲ್ಲಿಯೇ ವಾಕಿ ಟಾಕಿ ಬಳಸಿ ಸುದ್ದಿಕೊಡುತ್ತಿದ್ದ ಮೊದಲ ಪತ್ರಕರ್ತ ಎನ್ನುವುದು ಹೆಗ್ಗಳಿಕೆ.

ಮೃತರ ಅಂತ್ಯ ಸಂಸ್ಕಾರ ನ.29ರಂದು ಶನಿವಾರ ಮದ್ಯಾಹ್ನ 12ಕ್ಕೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಯುಡಬ್ಲೂಜೆ ಸಂತಾಪ-
ಅವರು 84ನೇ ವಸಂತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಮನೆಗೆ ತೆರಳಿ, ಮನೆಯಂಗಳದಲ್ಲಿಯೇ ಅವರಿಗೆ ಕೆಯುಡಬ್ಲೂೃಜೆ ಗೌರವ ನೀಡುವ ಕೆಲಸವನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ.
ಅ.ಚ.ಶಿವಣ್ಣ ಅಗಲಿಕೆಯಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ