LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಲಷ್ಕರ್‌ ಇ ತೈಬಾದ ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಶೋಪಿಯಾನ್‌ನಲ್ಲಿ ಬಂಧಿಸಲಾದ ಈ ಲಷ್ಕರ್ ಭಯೋತ್ಪಾದಕರನ್ನು ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ ಎಂದು ಗುರುತಿಸಲಾಗಿದೆ. ಭಾರಿ ದೊಡ್ಡ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ ಅವರು ಓಡಾಡುತ್ತಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಸೆರೆಯಾದ ಉಗ್ರರ ಬಳಿ 2 ಎಕೆ-56 ಬಂದೂಕು, 4 ಮ್ಯಾಗಜೀನ್‌ಗಳು, 102 ಲೈವ್ ಕಾರ್ಟ್ರಿಡ್ಜ್‌ಗಳು, 2 ಹ್ಯಾಂಡ್ ಗ್ರೆನೇಡ್‌ಗಳು, ನಗದು, ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್‌ಗಳು ಮತ್ತು ಆಧಾರ್ ಕಾರ್ಡ್‌ಗಳು ಇದ್ದವು.



ಶೋಪಿಯಾನ್ ಬಸ್ಕುಚನ್‌ನ ತೋಟವೊಂದರಲ್ಲಿ ಈ ಭಯೋತ್ಪಾದಕರು ಅಡಗಿಕೊಂಡಿದ್ದರು. ತೋಟದಲ್ಲಿ ಅವರ ಚಲನವಲನ ಕಂಡುಬಂದು ಭದ್ರತಾ ಪಡೆ ಅವರನ್ನು ಸುತ್ತುವರಿದಾಗ ಇಬ್ಬರು ಭಯೋತ್ಪಾದಕರು ಶರಣಾದರು. ಇದರಿಂದಾಗಿ ಸಂಭವನೀಯ ಎನ್ಕೌಂಟರ್ ತಪ್ಪಿತು.

ಹೈಬ್ರಿಡ್​ ಉಗ್ರರೆಂದರೆ ಸದಾ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವುದಿಲ್ಲ. ಸಾಮಾನ್ಯ ಜನರಂತೆ ಜೀವನ ನಡೆಸುತ್ತಿರುತ್ತಾರೆ. ತಮ್ಮ ಸಂಘಟನೆಗಳು ಕರೆದಾಗ ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಮತ್ತೆ ತಮ್ಮ ಮಾಮೂಲು ಜೀವನಕ್ಕೆ ಮರಳುತ್ತಾರೆ. ಅವರು ಶಸ್ತ್ರಾಸ್ತ್ರಗಳನ್ನು ಹಿಡಿದು ನೇರವಾಗಿ ದಾಳಿ ಮಾಡುವ ಜೊತೆಗೆ ಬೇರೆ ಬೇರೆ ತಂತ್ರಗಳನ್ನು ಕೂಡ ಬಳಸುತ್ತಾರೆ. ಇವರನ್ನು ಗುರುತಿಸುವುದು ತುಂಬಾ ಕಷ್ಟ. ಅವರು ಅಡಗಿಕೊಂಡಿರುವುದಿಲ್ಲ, ಕಚೇರಿ, ವಿದ್ಯಾರ್ಥಿಯಾಗಿ, ವ್ಯಾಪಾರಿಯಾಗಿ ಸಾಮಾನ್ಯರಂತೆಯೇ ಜೀವನ ಸಾಗಿಸುತ್ತಿರುತ್ತಾರೆ. ದಾಳಿ ನಡೆಸುವ ವೇಳೆ ಮಾತ್ರ ಅವರ ಉಗ್ರ ರೂಪ ಗೋಚರಿಸುತ್ತದೆ. ಡಾರ್ಕ್ ವೆಬ್, ಎನ್‌ಕ್ರಿಪ್ಟೆಡ್ ಮೆಸೆಜಿಂಗ್ ಆ್ಯಪ್‌ಗಳು, ಡ್ರೋನ್‌ಗಳು ಮತ್ತು ಇಂಟರ್‌ನೆಟ್ ಪ್ರಚಾರದ ಮೂಲಕ ಉಗ್ರ ಚಟುವಟಿಕೆ ನಡೆಸುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026