Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಕಾನೂನು ಪದವೀಧರರ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಕಾನೂನು ತರಬೇತಿ ಭತ್ಯೆಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.


ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನ.
ನಿಬಂಧನೆಗಳು:
ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1, ಪ್ರವರ್ಗ-2(), ಪ್ರವರ್ಗ-3() ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಶೇಕಡವಾರು ಪ್ರವರ್ಗ-1 ರಲ್ಲಿ 2 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು.

ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರ ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು.


ಕಾನೂನು ತರಬೇತಿಗೆ ಬಳ್ಳಾರಿ ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವರ್ಗ-1 ರಲ್ಲಿ ಶೇ.15 ರಷ್ಟು 2 ಅಭ್ಯರ್ಥಿಗಳು, ಪ್ರವರ್ಗ-2() ಶೇ.53 ರಷ್ಟು 5 ಅಭ್ಯರ್ಥಿಗಳು, ಪ್ರವರ್ಗ-3() ಶೇ.15ರಷ್ಟು 1 ಅಭ್ಯರ್ಥಿ, ಪ್ರವರ್ಗ-3(ಬಿ) ಶೇ.17 ರಷ್ಟು 2 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು.


ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ, ಪ್ರವರ್ಗ-2, 3ಎ ಮತ್ತು 3ಬಿ ರೂ.2.50 ಲಕ್ಷಗಳ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ.


ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು.
ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಬೇಕಾದ ದಾಖಲೆ:
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸುವುದು.
ಹೆಚ್ಚಿನ ವಿವರಗಳಿಗಾಗಿ  www.ballari.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ