LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈಡಿಗ ಸಮುದಾಯವು ಚಿಕ್ಕ ಸಮುದಾಯ ಅಭಿವೃದ್ಧಿಗೆ ಪೂರಕ ಕಾರ್ಯ: ಶಾಸಕ ಎಂ.ಚಂದ್ರಪ್ಪ.!

 

ಚಿತ್ರದುರ್ಗ : ಈಡಿಗ ಸಮುದಾಯವು ಸಣ್ಣ ಸಮುದಾಯವಾಗಿದ್ದು, ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿದ್ದಾರೆ. ಈಡಿಗ ಸಮೂದಾಯದವರೇ ಆದ ಡಾ.ರಾಜ್‌ಕುಮಾರ್, ಡಾ.ಪುನೀತ್ ರಾಜ್‌ಕುಮಾರ್ ಜೊತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಆದರ್ಶಗಳು ಜನಸಮುದಾಯಕ್ಕೆ ಉತ್ತಮ ಮಾರ್ಗದರ್ಶಕವಾಗಿದೆ ಎಂದು ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ಅಭಿಪ್ರಾಯಪಟ್ಟರು.

ಚಳ್ಳಕೆರೆ ರಸ್ತೆಯಲ್ಲಿರುವ ಈಡಿಗರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ದಿನಾಂಕ ೨೪-೧೧-೨೦೨೪ ರಂದು ಭಾನುವಾರ ಬೆಳಿಗ್ಗೆ ೧೦-೩೦ಕ್ಕೆ ಏರ್ಪಡಿಸಿದ ತಾಲ್ಲೂಕು ಈಡಿಗರ ಸಂಘ ಚಿತ್ರದುರ್ಗ (ರಿ), ಪದಾಧಿಕಾರಿಗಳ ಪದಗ್ರಹಣ ಮತ್ತು ಸರ್ಕಾರಿ ಸೇವೆಸಲ್ಲಿಸುತ್ತಿರುವ ಹಾಗೂ ಸರ್ಕಾರಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ ಈಡಿಗ ಸಮಾಜ ಬಾಂಧವರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಡಿಗ ಸಮುದಾಯವು ಇದೂವರೆಗೂ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ. ನೇರವಾಗಿ ನಮ್ಮನ್ನು ಸಂಪರ್ಕಿಸಿ ಸರ್ಕಾರದ ಯೋಜನೆಗಳನ್ನು ಪಡೆಯಬೇಕೆಂದು ಹೇಳಿದರು.

ತಾಲ್ಲೂಕು ಈಡಿಗರ ಸಂಘದ ಅಧ್ಯಕ್ಷರು ಹಾಗೂ ವಕೀಲರಾದ ಹೆಚ್.ಓ ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಈಡಿಗ ಸಮಾಜದಲ್ಲಿ ಬಡತನದಲ್ಲಿರುವ ಕುಟುಂಬಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವ ಅನುದಾನಗಳನ್ನು ಕೊಡಿಸಿಕೊಡಲು ನಮ್ಮ ಸಂಘವು ನಿರಂತರವಾಗಿ ಶ್ರಮಿಸುತ್ತದೆ. ಅದೇ ರೀತಿ ಚಿತ್ರದುರ್ಗ ನಗರದಲ್ಲಿ ಕರ್ನಾಟಕ ರತ್ನ ಡಾ.ಪುನೀತ್‌ರಾಜ್‌ಕುಮಾರ್ ಇವರ ಹೆಸರನ್ನು ಯಾವುದಾದರೂ ವೃತ್ತಕ್ಕೆ ಹೆಸರಿಸಬೇಕೆಂದು ಆಗ್ರಹಿಸಿದರು. ಭರಮಸಾಗರದಲ್ಲಿ ಈಡಿಗ ಸಮಾಜಕ್ಕೆ ಸಮುದಾಯಭವನವನ್ನು ನಿರ್ಮಾಣ ಮಾಡಲು ಒಂದು ಜಾಗವನ್ನು ಕೊಡಿಸಿಕೊಡಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಿತಾ ರಾಘವೇಂದ್ರ, ಕೆಡಿಪಿ ಸದಸ್ಯರಾದ ಕೆ.ಸಿ ನಾಗರಾಜ್, ಉಪಾಧ್ಯಕ್ಷರಾದ ಸಿ.ರಮೇಶ್, ಪ್ರಕಾಶ್, ನಾರಾಯಣಸ್ವಾಮೀ, ಪ್ರಧಾನ ಕಾರ್ಯದರ್ಶಿ ಆರ್ ಕುಮಾರಸ್ವಾಮಿ ಹಾಗೂ ನಾಗೇಂದ್ರಪ್ರಸಾದ್ ಮುಂತಾದ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೂಜಾ ಪ್ರಾರ್ಥಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ