Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಬೆಳ್ಳಿ ರಥದಲ್ಲಿ ಕೂರಿಸಿ ಸಮ್ಮೇಳನ ಅಧ್ಯಕ್ಷ ಎಂ.ಜಿ.ರಂಗಸ್ವಾಮಿಗೆ ಅದ್ಧೂರಿ ಮೆರವಣಿಗೆ

ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ.
ಚಂದ್ರವಳ್ಳಿ ನ್ಯೂಸ್
, ಹಿರಿಯೂರು:
ತಾಲೂಕು ಕಸಾಪ ಸಮ್ಮೇಳನ ಅಧ್ಯಕ್ಷರಾದ ಎಂ.ಜಿ.ರಂಗಸ್ವಾಮಿ ಅವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಕಲಾ ತಂಡಗಳು ಸಾಂಪ್ರದಾಯಿಕ ನೃತ್ಯ ಮತ್ತು ಸಂಗೀತದೊಂದಿಗೆ ಸಮ್ಮೇಳನದ ವಿಷಯ ಪ್ರಚಾರ ಮಾಡಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದವರು ಕನ್ನಡ ಧ್ವಜ ಮತ್ತು ಭಾವುಟಗಳನ್ನು ಹಿಡಿದು "ಕನ್ನಡ ನಾಡು
, ಕನ್ನಡ ಭಾಷೆ, ಕನ್ನಡ ಮನೆ" ಎಂಬ ಘೋಷಣೆ ಕೂಗಿದರು.
ಕಸಾಪ ಸಮ್ಮೇಳನ ಅಧ್ಯಕ್ಷ ಎಂ.ಜಿ ರಂಗಸ್ವಾಮಿ ಅವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಇದೊಂದು  ಭವ್ಯವಾದ ಸಂಪ್ರದಾಯವಾಗಿದೆ.


ಇದು ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ ಮತ್ತು ಗೌರವ ಸೂಚಿಸುವ ಒಂದು ಮಾರ್ಗವಾಗಿದೆ. ಬೆಳ್ಳಿ ರಥವು ಅಧ್ಯಕ್ಷರನ್ನು ಕೂರಿಸಿಕೊಂಡು ನಗರದ ರಸ್ತೆಗಳಲ್ಲಿ ಸಾಗುವಾಗ, ಸಾರ್ವಜನಿಕರು, ಕನ್ನಾಭಿಮಾನಿಗಳು, ಹಿತೈಷಿಗಳು ಸ್ನೇಹಿತರು ರಂಗಸ್ವಾಮಿ ಅವರಿಗೆ ಶಾಲು ಹೊದಿಸಿ ಹೂವಿನ ಹಾರ ಹಾಕಿ ಸನ್ಮಾನಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ಕಸಾಪ ಸಮ್ಮೇಳನ ಅಂಗವಾಗಿ ಅಧ್ಯಕ್ಷರನ್ನು ಮೆರವಣಿಗೆ ಮೂಲಕ ಕರೆದೊಯ್ಯುವುದು ಸಮ್ಮೇಳನದ ಒಂದು ಪ್ರಮುಖ ಅಂಗವಾಗಿದೆ ಮತ್ತು ಇದನ್ನು ಸಾಮಾನ್ಯವಾಗಿ ಸಮ್ಮೇಳನದ ಉದ್ಘಾಟನಾ ಸಮಾರಂಭದ ಭಾಗವಾಗಿ ನಡೆಸಲಾಗುತ್ತದೆ.

ಎಂ.ಜಿ.ರಂಗಸ್ವಾಮಿ ಅವರು ಹಿರಿಯೂರು ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದವರು. ಅವರು ಉಪನ್ಯಾಸಕರಾಗಿ, ಹವ್ಯಾಸಿ ಪತ್ರಕರ್ತರಾಗಿ, ಲೇಖಕರಾಗಿ ಜಿಲ್ಲೆಯಲ್ಲಿ ಸಾಕಷ್ಟು ಸಾಹಿತ್ಯದ ಕೆಲಸ ಮಾಡಿದ್ದಾರೆ. ಅವರ ಕೃತಿಗಳಾದ "ಹಿರಿಯೂರು ಸೀಮೆ ಜಾನಪದ", "ನೆಲದ ಸಂಕಥನ", "ದುರುಗ ಸೀಮೆ ಸಾಧಕರು" ಪ್ರಕಟವಾಗಿವೆ.
ಮೆರವಣಿಗೆಯಲ್ಲಿ ಭಾಗವಹಿಸಿದ ಕಲಾ ತಂಡದವರಿಗೆ ಸಮ್ಮೇಳನ ಸಮಿತಿಯವರು ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಿದರು.
ಮೆರವಣಿಗೆ ನಂತರ ವೇದಿಕೆ ಮುಂಭಾಗದಲ್ಲಿ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಸಮ್ಮೇಳನಾಧ್ಯಕ್ಷ ಎಂ.ಜಿ ರಂಗಸ್ವಾಮಿ ಅವರನ್ನು ಶಾಲು ಹೊದಿಸಿ ಸನ್ಮಾಸಿ ಗೌರವಿಸಿದರು.


ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಜಿ.ಪ್ರೇಮ್‌ಕುಮಾರ್‌, ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ, ಮಹಮ್ಮದ್‌ ಫಕೃದ್ದೀನ್‌, ಗೌರವ ಕಾರ್ಯದರ್ಶಿಗಳಾದ ಎಚ್‌.ಕೃಷ್ಣಮೂರ್ತಿ, ಚಮನ್ ಷರೀಫ್, ಜಿ.ನಿಜಲಿಂಗಪ್ಪ, ಕಸಬಾ ಹೋಬಳಿ ಅಧ್ಯಕ್ಷ ಪೊಲೀಸ್‌ ಭೇಟೆ ಪ್ರಸನ್ನ, ಧರ್ಮಪುರ ಹೋಬಳಿ ಅಧ್ಯಕ್ಷ ಅಶೋಕ್‌, ಬಸವರಾಜ್‌, ರೈತ ಮುಖಂಡ ಹೊರಕೇರಪ್ಪ, ಪ್ರಹ್ಲಾದ್‌, ಚಂದ್ರಶೇಖರಯ್ಯ, ವೇದ, ಪುಷ್ಪ, ಷಫೀವುಲ್ಲಾ, ಗಡಾರಿ ಕೃಷ್ಣ, ಮಾರುತೇಶ್‌, ಈರಣ್ಣ ಇತರರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ