Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಾಜನ್ ವರದಿ ಅಂತಿಮ : ಡಿಸಿ ವರದಿ

ಬೆಳಗಾವಿ: ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂದಿನಂತೆ ತಕರಾರು ತೆಗೆಯುತ್ತಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಬುಧವಾರ ಮುಂಬೈಯಲ್ಲಿ ಬೆಳಗಾವಿ ಗಡಿ ವಿವಾದ ಕುರಿತು ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದೆ. ಬೆಳಗಾವಿ ಗಡಿ ವಿವಾದ ಸಂಬಂಧ ಇಲ್ಲಿಯ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕದ ಪರ ಅಂಗೀಕರಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಹಲವು ತಿಂಗಳುಗಳಿಂದ ಒತ್ತಾಯ ಮಾಡುತ್ತಿವೆ. ಈ ನಡುವೆ ಇದೀಗ ಮಹತ್ವದ ಬೆಳವಣಿಗೆ ನಡೆದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾಜನ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವ ನಿಲುವನ್ನು ಕರ್ನಾಟಕ ಸರ್ಕಾರವು 1976 ರಲ್ಲಿಯೇ ಕೈಗೊಂಡಿರುವುದರಿಂದ, ಅದಕ್ಕೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಬೆಳಗಾವಿ ಡಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯ ಅಂಗೀಕರಿಸುವ ಕುರಿತು ಕನ್ನಡ ಸಂಘಟನೆಗಳು ಸಲ್ಲಿಸಿರುವ ಮನವಿ, ಪಾಲಿಕೆ ಆಯುಕ್ತರ ಅಭಿಪ್ರಾಯ ಹಾಗೂ ವಿಧಾನಮಂಡಲದ ಹಿಂದಿನ ನಿರ್ಣಯಗಳನ್ನು ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಈ ವರದಿ ಕಳುಹಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮಹಾಜನ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕೆಂಬ ನಿರ್ಣಯ ಈಗಾಗಲೇ ಅಂಗೀಕಾರಗೊಂಡಿದೆ. 2022ರ ಡಿಸೆಂಬರ್ 22ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲೂ ಮಹಾಜನ್ ಆಯೋಗದ ವರದಿಯೇ ರಾಜ್ಯದ ಹಿತರಕ್ಷಣೆಗೆ ಸಮರ್ಥವಾದ ದಾಖಲೆ ಎಂಬ ನಿಲುವನ್ನು ಪುನರುಚ್ಚರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರವು ಗಡಿ ವಿವಾದವನ್ನು ಸುಪ್ರೀಂ ಕೋರ್ಟ್‌ಲ್ಲಿ ಪ್ರಶ್ನಿಸಿರುವುದರಿಂದ ಪ್ರಕರಣ ನ್ಯಾಯಾಂಗದ ವಿಚಾರಣೆಯಲ್ಲಿದೆ.
ಪ್ರಶ್ನಿಸಿರುವುದರಿಂದ ಪ್ರಕರಣ ನ್ಯಾಯಾಂಗದ ವಿಚಾರಣೆಯಲ್ಲಿದೆ. ಆದಾಗ್ಯೂ, ಮಹಾಜನ್ ಆಯೋಗದ ವರದಿ ಕುರಿತು ಕರ್ನಾಟಕದ ನಿಲುವು ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರವು ಹಿಂದೆ ಕೈಗೊಂಡ ನಿರ್ಣಯದ ಅನ್ವಯವೇ ಕ್ರಮ ವಹಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದೆ.

ವರದಿಯ ಕೊನೆಯ ಸಾಲಿನಲ್ಲಿ, "ಕರ್ನಾಟಕ ಸರ್ಕಾರದಿಂದ ಈಗಾಗಲೇ 1976ರಲ್ಲಿ ಮಹಾಜನ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕೆಂದು ನಿರ್ಣಯಿಸಲಾಗಿರುವ ಕಾರಣ, ಅದರಂತೆ ಕ್ರಮ ವಹಿಸಬಹುದಾಗಿದೆ" ಎಂದು ಸ್ಪಷ್ಟವಾಗಿ ಶಿಫಾರಸು ಮಾಡಲಾಗಿದೆ. ಈ ಅಭಿಪ್ರಾಯವು ಬೆಳಗಾವಿ ಮಹಾನಗರ ಪಾಲಿಕೆಯ ನಿರ್ಣಯ ಕುರಿತ ಸರ್ಕಾರದ ಮುಂದಿನ ತೀರ್ಮಾನಕ್ಕೆ ಮಹತ್ವದ ಆಧಾರವಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ