LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣೂರು–ಬಾಗಲೂರು ವೈಟ್‌ ಟಾಪಿಂಗ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು: ಹೆಣ್ಣೂರು–ಬಾಗಲೂರು ವೈಟ್‌ ಟಾಪಿಂಗ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸುವಂತೆ *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪೂರ್ವ ನಗರಪಾಲಿಕೆ ವ್ಯಾಪ್ತಿಯ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಸುಮಾರು 5 ಕಿ.ಮೀ ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ನಿನ್ನೆ ಮಧ್ಯರಾತ್ರಿ 1.00 ಗಂಟೆಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯ ಪರಿಶೀಲನೆ ನಡೆಸಿದರು.

ಈ ರಸ್ತೆಯ ಒಂದು ಭಾಗದಲ್ಲಿ 1 ಕಿ.ಮೀ ಮತ್ತು ಮತ್ತೊಂದು ಭಾಗದಲ್ಲಿ 400 ಮೀ. ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಭಾಗದಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ 3 ತಿಂಗಳ ಒಳಗಾಗಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ಕಾಮಗಾರಿಯ ಕಾರ್ಯಯೋಜನೆ (Flow Chart) ಅನ್ನು ಮೂರು ದಿನಗಳೊಳಗಾಗಿ ಸಲ್ಲಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

*ಹೆಚ್ಚು ಯಂತ್ರೋಪಕರಣಗಳನ್ನು ಬಳಸಿ ಕಾರ್ಯಗತಗೊಳಿಸಿ:*

ಹೆಣ್ಣೂರು–ಬಾಗಲೂರು ರಸ್ತೆ ಸದಾ ವಾಹನ ಸಂಚಾರದ ದಟ್ಟಣೆ ಇರುವ ಪ್ರಮುಖ ಮಾರ್ಗವಾಗಿದ್ದು, ಹೆಚ್ಚಿನ ಯಂತ್ರೋಪಕರಣಗಳು ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಕಾಮಗಾರಿಯನ್ನು ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

*ಗುಂಡಿಗಳಿಲ್ಲದಂತೆ ಕ್ರಮವಹಿಸಿ:*

ವೈಟ್‌ ಟಾಪಿಂಗ್ ಕೈಗೆತ್ತಿಕೊಂಡಿರುವ 5 ಕಿ.ಮೀ ರಸ್ತೆಯಲ್ಲಿ ಯಾವುದೇ ರಸ್ತೆ ಗುಂಡಿಗಳು ಇರಬಾರದು. ಒಂದು ವೇಳೆ ಗುಂಡಿಗಳು ಕಂಡುಬಂದಲ್ಲಿ ಅವನ್ನು ಆದ್ಯತೆ ಮೇರೆಗೆ ಮುಚ್ಚಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ತಿಳಿಸಿದರು.

*ಸುಧಾರಣೆ ಕಾಣದಿದ್ದರೆ ಟೆಂಡರ್ ರದ್ದು:*

ವೈಟ್‌ ಟಾಪಿಂಗ್ ಕಾಮಗಾರಿಯ ಪ್ರಗತಿ ಕುರಿತು 15 ದಿನಗಳ ಬಳಿಕ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ಟೆಂಡರ್ ರದ್ದುಪಡಿಸಲಾಗುವುದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ