Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಲೋಕಸಭೆಯಲ್ಲಿ ಮಹಿಳಾ ನಾರಿ ಶಕ್ತಿ ವಂದನಾ ಅಧಿನಿಯಮ ಪಾಸ್ !

 

ದೆಹಲಿ:
ಕೇಂದ್ರ ಸರ್ಕಾರದಿಂದ ರಾಜ್ಯಗಳ ವಿಧಾನಸಭೆ, ಸಂಸತ್ ನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ವಿಧೇಯಕವನ್ನು ವಿಶೇಷ ಸಂಸತ್ ಅಧಿವೇಶನದಲ್ಲಿ ನಿನ್ನೆ ಮಂಡಿಸಲಾಗಿತ್ತು. ಸುದೀರ್ಘ 8 ಗಂಟೆಗಳ ಚರ್ಚೆಯ ಬಳಿಕ, ಇಂದು ಲೋಕಸಭೆಯಲ್ಲಿ ಸಂಸದರಿಂದ ಮತ ಪತ್ರಗಳ ಮೂಲಕ ವಿಧೇಯ ಪರ, ವಿರೋಧ ಬೆಂಬಲಿಸಿ ಮತದಾನ ನಡೆಯಿತು.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಹೆಚ್ಚು ಮತಗಳು ಪರವಾಗಿ ಬೀಳುವ ಮೂಲಕ ಅಂಗೀಕಾರಗೊಂಡಿದೆ.

ನಿನ್ನೆ ನೂತನ ಸಂಸತ್ ಭವನದಲ್ಲಿ ಸರ್ಕಾರವು ಮೊದಲ ಮಸೂದೆಯನ್ನ ಲೋಕಸಭೆಯ ಕಲಾಪಗಳಲ್ಲಿ ಪರಿಚಯಿಸಿತು. ಮೊದಲ ಮಸೂದೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ್ದು, ಇದಕ್ಕೆ 'ನಾರಿ ಶಕ್ತಿ ವಂದನಾ ಕಾಯ್ದೆ' ಎಂದು ಹೆಸರಿಡಲಾಗಿತ್ತು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಯಡಿ 181 ಲೋಕಸಭಾ ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು.

ವಿಧಾನಸಭೆಯ ಶೇ.33ರಷ್ಟು ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಶೇಕಡಾ 33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 84 ಸ್ಥಾನಗಳಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮತ್ತು ಶೇ.33ರಷ್ಟು ಸ್ಥಾನಗಳನ್ನ ಪರಿಶಿಷ್ಟ ಪಂಗಡಗಳಿಗೆ ಮೀಸಲಿಡಲಾಗಿದೆ. ಇದೇ ರೀತಿಯಲ್ಲಿ ಎಲ್ಲಾ ರಾಜ್ಯಗಳಲ್ಲಿಯೂ ಮಹಿಳಾ ಮೀಸಲಾತಿಯನ್ನು ಕಲ್ಪಿಸುವುದು ವಿಧೇಯಕರ ಮುಖ್ಯ ಉದ್ದೇಶವಾಗಿದೆ.

ಇಂತಹ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ನಿನ್ನೆಯಿಂದ ಲೋಕಸಭೆಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆಯನ್ನು ನಡೆಸಲಾಯಿತು.

ಪರ, ವಿರೋಧದ ಚರ್ಚೆಯಾದ ನಂತ್ರ, ನೂತನ ಸಂಸತ್ ಭವನದಲ್ಲಿನ ಮೊದಲ ಬಿಲ್ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಮತಕ್ಕೆ ಹಾಕುವುದಕ್ಕೆ ಸೂಚಿಸಿದ್ದರು. ಈ ಬಳಿಕ ಸಂಸದರಿಂದ ಮತ ಪತ್ರಗಳ ಮೂಲಕ ಮತದಾನ ನಡೆಯಿತು.

ಲೋಕಸಭಾ ಸದಸ್ಯರು ಮತ ಪತ್ರಗಳ ಮೂಲಕ ಮಹಿಳಾ ಮೀಸಲಾತಿ ವಿಧೇಯಕ ಸಂಬಂಧ ತಮ್ಮ ಮತಗಳನ್ನು ಚಲಾಯಿಸಿದರು. ಹೀಗೆ ನಡೆದಂತ ಮತದಾನದಲ್ಲಿ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಹೆಚ್ಚು ಮತಗಳು ಚಲಾವಣೆಗೊಳ್ಳುವ ಮೂಲಕ, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದೆ. ಈ ಮೂಲಕ ಐತಿಹಾಸಿಕ ಕ್ಷಣಕ್ಕೆ ಹೊಸ ಸಂಸತ್ ಭವನ ಸಾಕ್ಷಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ