LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಲಯಾಳಂ ನಟ ದಿಲೀಪ್ ಶಂಕರ್ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ತಿರುವನಂತಪುರಂ : ಮಲಯಾಳಂ ನಟ ದಿಲೀಪ್ ಶಂಕರ್ ಭಾನುವಾರ ತಿರುವನಂತಪುರಂನ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಇನ್ನೂ ಬಹಿರಂಗವಾಗಿಲ್ಲ. ವರದಿಗಳ ಪ್ರಕಾರ ದಿಲೀಪ್ ಡಿಸೆಂಬರ್ 19 ರಂದು ಹೋಟೆಲ್‌ಗೆ ಚೆಕ್ ಇನ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ದಿಲೀಪ್ ಶಂಕರ್ ಅವರು ಹೋಟೆಲ್‌ನಲ್ಲಿ ತಂಗಿದ್ದಾಗ ಒಮ್ಮೆಯೂ ತಮ್ಮ ಕೊಠಡಿಯಿಂದ ಹೊರಬರಲಿಲ್ಲ. ಅವರ ಸಹನಟರು ನಟನಿಗೆ ಕರೆ ಮಾಡಿದ್ದರು ಆದರೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ನಂತರ, ಅವರು ದಿಲೀಪ್‌ನನ್ನು ಹುಡುಕಿ ಹೋಟೆಲ್‌ಗೆ ಆಗಮಿಸಿದರು ಮತ್ತು ಅವರ ಕೊಠಡಿಯನ್ನು ತೆರೆಯಲು ಹೋಟೆಲ್ ಸಿಬ್ಬಂದಿಯನ್ನು ಕೇಳಿದ್ದಾರೆ ಆಗ ಕೋಣೆಯೊಳಗೆ ಶವವಾಗಿ ಪತ್ತೆಯಾಗಿದ್ದಾನೆ.

ದೂರದರ್ಶನ ಸರಣಿ ಪಂಚಾಗ್ನಿ ಚಿತ್ರೀಕರಣಕ್ಕಾಗಿ ದಿಲೀಪ್ ಶಂಕರ್ ತಿರುವನಂತಪುರದಲ್ಲಿದ್ದರು ಎಂದು ವರದಿಗಳು ಹೇಳಿವೆ. ದಿಲೀಪ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ನಿರ್ದೇಶಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಿಲೀಪ್ ಅವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ.

ದಿಲೀಪ್ ಶಂಕರ್ ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫೋರೆನ್ಸಿಕ್ ತಂಡವು ಕೊಠಡಿಯನ್ನು ಪರಿಶೀಲಿಸುತ್ತದೆ. ಪೊಲೀಸರ ಪ್ರಕಾರ, ನಟನ ಸಾವಿಗೆ ಯಾವುದೇ ಅಸ್ವಾಭಾವಿಕ ಅಂಶಗಳಿಲ್ಲ ಎಂದು ತಿಳಿದು ಬಂದಿದೆ. ಎರ್ನಾಕುಲಂ ಮೂಲದವರಾದ ದಿಲೀಪ್ ಶಂಕರ್ ಹಲವಾರು ಜನಪ್ರಿಯ ಮಲಯಾಳಂ ಕಾರ್ಯಕ್ರಮಗಳಿಂದ ಹೆಸರುವಾಸಿಯಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು