ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ತೋಟದಲ್ಲಿ ಕೇಬಲ್ ತೆಗೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ದೇವರಹಳ್ಳಿ ಗ್ರಾಮದ ನಿವಾಸಿ ಓಂಕಾರಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ತೋಟದಲ್ಲಿ ಓಂಕಾರಪ್ಪ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದರು. ಉಳುಮೆಗೆ ಅಡ್ಡಲಾಗಿದ್ದ ವಿದ್ಯುತ್ ಕೇಬಲ್ ತೆಗೆಯುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.