LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ಬ್ಯಾಂಕ್ ಲಾಕರ್‌ನಲ್ಲಿಟ್ಟ 8 ಲಕ್ಷ ರೂ.ಗೆದ್ದಲು ಹಿಡಿದು ಪುಡಿ ಪುಡಿ..! ಹಣಕ್ಕೆ ಯಾರು ಹೊಣೆ?

ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ ಗ್ರಾಹಕರೊಬ್ಬರು ಇದೀಗ ಪರಿತಪಿಸುವಂತಾಗಿದೆ.

ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂಪಾಯಿ ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿವೆ.

ಈ ಸಂಬಂಧ ಗ್ರಾಹಕರೊಬ್ಬರು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.ಆದರೆ ಬ್ಯಾಂಕ್ ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳುತ್ತಿದೆ.


ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ.

ಲಾಕರ್ ಒಳಗೆ ನೋಡಿದರೆ ಮಳೆ ನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದ ದುಡ್ಡು ಸಂಪೂರ್ಣವಾಗಿ ಕಪ್ಪಾಗಿತ್ತು ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲಾ ನೊಟುಗಳು ಇದೇ ರೀತಿ ಆಗಿದೆ.

ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ನಗದನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಇದರಿಂದ ತೋಚದೆ ‌ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಬ್ಯಾಂಕ್ ನ ಪ್ರಧಾನ ಕಚೇರಿಗೆ ದೂರು ನೀಡಿ, ಪರಿಹಾರಕ್ಕೆ ಮೊರೆ ಇಟ್ಟಿದ್ದಾರೆ

ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಹೀಗಾಗಿದೆ ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ. ತಮಗಾದ ಅನ್ಯಾಯಕ್ಕೆ ಪರಿಹಾರ ಏನು ಎಂದು ಪ್ರಶ್ನಿಸುತ್ತಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ