LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಮೇ 24ರಿಂದ ಮಾವು-ಹಲಸು ಮೇಳ

ಬೆಂಗಳೂರು, ಮೇ 14: ಈ ವರ್ಷ ಮಳೆ ಇಲ್ಲದ ಕಾರಣ ನಿರೀಕ್ಷಿತ ಮಾವು ಫಸಲು ಬಾರದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲಿ ಮಾವು ಮೇಳ ನಡೆಯುವುದು ಡೌಟು ಎನ್ನಲಾಗಿತ್ತು. ಪರಿಸ್ಥಿತಿ ಹೀಗಿದ್ದರೂ ಸಹಿತ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು 'ಮಾವು ಮೇಳ' (Bengaluru Mango Fair 2024) ಆಯೋಜನೆ ಮಾಡುವುದಾಗಿ ತಿಳಿಸಿದೆ.

ಬೆಂಗಳೂರಿನ ಸಸ್ಯಕಾಶಿ ಲಾಲ್‌ ಬಾಗ್ ಉದ್ಯಾನದಲ್ಲಿ ಇದೇ ತಿಂಗಳ ಮೇ 24ರಿಂದ ಜೂನ್ 10 ರವರೆಗೆ ಈ ಮಾವು ಮಹಾಮೇಳ ನಡೆಯಲಿದೆ. ಮಾವಿನ ಜೊತೆಗೆ ಹಲಸಿನ ಮೇಳವು ಜರುಗಲಿದೆ. ವಿವಿಧ ತರಹೇವಾರಿ ರುಚಿ, ತಳಿಯ ಮಾವಿನ ಹಣ್ಣುಗಳು ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಲಭ್ಯವಿರಲಿವೆ.

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಧಾರವಾಡದಂತಹ ದೂರದ ಜಿಲ್ಲೆಗಳಿಂದಲೂ ಮಾವು ಬೆಳೆಗಾರರು ತಾವು ಬೆಳೆದ ಮಾವಿನ ಸಮೇತ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿಗಮ ಮಾಹಿತಿ ನೀಡಿದೆ. ಅನೇಕ ಜಾತಿಯ ಹಣ್ಣುಗಳು ಮಾರಾಟ ಬೆಂಗಳೂರು ಮಾವು ಮೇಳದಲ್ಲಿ 'ರಸಪುರಿ, ಮಲಗೋವಾ, ಸೆಂಧೂರ, ನೀಲಂ, ಮಲ್ಲಿಕಾ, ತೋತಾಪುರಿ' ಸೇರಿದಂತೆ ಅನೇಕ ತಳಿಯ ಮಾವಿನ ಹಣ್ಣುಗಳನ್ನು ಸವಿಯಬಹುದಾಗಿದೆ. ಅಷ್ಟೇ ಅಲ್ಲದೇ ಅಪ್ಪೆಮಿಡಿ ಉಪ್ಪಿನಕಾಯಿ, ಮಿಡಿ ಉಪ್ಪಿನಕಾಯಿ ಅನೇಕ ಬಗೆಯ ಉಪ್ಪಿನಕಾಯಿಗಳನ್ನು ಇಲ್ಲಿ ಖರೀದಿಸಬಹುದಾಗಿದೆ.
ಈ ವರ್ಷ ಮಳೆ ಕೊರತೆ, ಬರಗಾಲ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಾವಿನ ಇಳುವರಿ ಬಂದಿಲ್ಲ. ಶೇಕಡಾ 30ರಷ್ಟು ಮಾತ್ರವೇ ಮಾವಿನ ಬೆಳೆ ಕೈಗೆ ಸಿಕ್ಕಿದೆ. ಹೀಗಾಗಿ ಮಾರುಕಟ್ಟೆಯಲ್ಲಿಯೂ ಮಾವು ಮಾರಾಟ, ಖರೀದಿ ಭರಾಟೆ ಕಂಡು ಬಂದಿಲ್ಲ. ಹೆಚ್ಚಿನ ಪ್ರಮಾಣದ ಮಾವು ಬಾರದ ಕಾರಣ ಈ ಬಾರಿ ಹಣ್ಣು ತುಟ್ಟಿಯಾಗಿದೆ. ಹೀಗಾಗಿ ಜನರು ಖರೀದಿಗೂ ಹಿಂದೆ ನೋಡುವ ಸ್ಥಿತಿ ಎದುರಾಗಿದೆ.

ರಿಯಾಯಿತಿ ಬೆಲೆಗೆ ಹಣ್ಣು ಸಿಗುತ್ತಾ? ಪ್ರತಿ ವರ್ಷದಂತೆ ಈ ವರ್ಷವು ಲಾಲ್‌ ಬಾಗ್ ಉದ್ಯಾನದಲ್ಲಿ ಮಾವು ಮೇಳ ನಡೆಯುತ್ತಿದೆ. ಆದರೆ ಈ ಭಾರಿ ಇಳುವರಿ ಕಡಿಮೆ ಕಾರಣಕ್ಕೆ ರೈತರಿಂದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾವು ಲಭ್ಯವಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಕುರಿತು ಸ್ಪಷ್ಟತೆ ಮೇಳದಲ್ಲಿ ಸಿಗುವ ಸಾಧ್ಯತೆ ಇದೆ.

ಮಾವಿನ ಜೊತೆ ಹಲಸು ಮೇಳ ಅನೇಕ ಜಾತಿ ಮಾವಿನ ಹಣ್ಣುಗಳ ಜೊತೆಗೆ ಹಲಸಿನ ಹಣ್ಣುಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿವೆ. ರೈತರ ತಮ್ಮ ತೋಟದಲ್ಲಿ ಬೆಳೆದ ಮಾವು ಜೊತೆಗೆ ಹಲಸಿನ ಹಣ್ಣುಗಳ ಲೋಡ್ ಸಮೇತರಾಗಿ ಮೇಳಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಹಲಸಿನ ಹಣ್ಣು, ಇನ್ನಿತರ ಹಲಸಿನ ಕಾಯಿಯಿಂದ ಮಾಡಿದ ಆಹಾರ ಪದಾರ್ಥಗಳ ಪ್ರದರ್ಶನ ಮಾರಾಟ ಇಲ್ಲಿರಲಿದೆ. ಸದ್ಯ ಮಾಹಿತಿ ಪ್ರಕಾರ, ಮೇಳದಲ್ಲಿ ಎಷ್ಟು ಮಳಿಗೆಗಳು ಇರುತ್ತವೆ. ಪಾರ್ಕಿಂಗ್ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳ ಕುರಿತು ಮಾಹಿತಿ ತಿಳಿಯಬೇಕಿದೆ.


 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು