LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೆ ಚುನಾವಣಾ ವಿಭಾಗದ ಗಮನಕ್ಕೆ ತರಬೇಕೆಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಬ್ಯಾಂಕ್ ನೋಡಲ್ ಅಧಿಕಾರಿಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂಡಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದೇ ಖಾತೆಯಿಂದ ಸುಮಾರು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ನೀವೇ ಜವಾಬ್ದಾರರಾಗುತ್ತೀರಾ. ಅಲ್ಲದೇ ಚುನಾವಣಾ ಆಗೋಗದಿಂದ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಪೂರ್ವನಿದರ್ಶನವಿಲ್ಲದೆ ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ ಒಂದು ಬ್ಯಾಂಕ್ ಖಾತೆಯಿಂದ ಆರ್.ಟಿ.ಜಿ.ಎಸ್/ನೆಫ್ಟ್ ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವದು, ಯಾವುದೇ ನಗದು ಠೇವಣಿ ಅಥವಾ 1 ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳ ಬಗ್ಗೆ ಚುನಾವಣಾ ವಿಭಾಗಕ್ಕೆ ಕೂಡಲೆ ಮಾಹಿತಿ ನೀಡಲು ತಿಳಿಸಿದರು.

ನಗದು ಠೇವಣಿ ಅಥವಾ ಹಿಂಪಡೆಯುವಿಕೆಯ ಮೊತ್ತವು 10 ಲಕ್ಷ ರೂ.ಗಳಿಗಿಂತ ಹೆಚ್ಚಿದ್ದರೆ, ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ರವಾನಿಸಲಾಗುವುದು ಎಂದರು.

ಜನಪ್ರತಿನಿಧಿಗಳ ಹೆಸರು/ಭಾವಚಿತ್ರಗಳನ್ನು ತೆಗೆಯಿರಿ:

ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಆಸ್ತಿಗಳಲ್ಲಿ 72 ಗಂಟೆಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆಯಬೇಕು. ಇಲ್ಲವಾದಲ್ಲಿ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭದ್ರತಾ ಸಿಬ್ಬಂದಿಯೊಂದಿಗೆ ನಗದು ರವಾನಿಸಿ:

ಯಾವುದೇ ಬ್ಯಾಂಕ್ ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು‌ ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರವಾನೆ ಮಾಡಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿ ಸೀಜ್ ಮಾಡಿಕೊಳ್ಳುವ ಹಾಗೆ ಮಾಡಿಕೊಳ್ಳಬೇಡಿ ಎಂದು ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರಾಮ ಚಂದ್ರ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಭೀನಾ, ವಿವಿಧ ಬ್ಯಾಂಕ್ ಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ