LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ: ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಸೇನಾ ಅಧಿಕಾರಿಗಳ ಭೇಟಿ; ಪರಿಶೀಲನೆ


ರಾಯಚೂರು ಜೂನ್ 09 : ಭಾರತೀಯ ಸೇನೆಯ ಅಧಿಕಾರಿಗಳಾದ ಮೇಜರ್ ಬಸವ ಪ್ರಭು ಹಾಗೂ ಸಂಜೀವ್ ಸಾಧುನವರ್ ಅವರ ನೇತೃತ್ವದ ತಂಡವು, ರಾಯಚೂರ ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲೆಯಲ್ಲಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಂಡವು ಈ ಕಾರ್ಯಕ್ರಮ ನಡೆಸಿತು.
ರಾಯಚೂರಿನ ತಾಲೂಕಿನ ಆತ್ಮರು, ಕುರ್ವಕರ್ದಾ, ಕುರ್ವಕಲಾ, ದೊಂಗರಾಂಪುರ, ಕಾಡೂರು ಹಾಗೂ ಗುರ್ಜಾಪೂರ, ಗುರ್ಜಾಪೂರ ಬ್ರಿಡ್ಜ್ ಕಮ್ ಬ್ಯಾರೇಜ ಹಾಗೂ ದೇವದುರ್ಗ ತಾಲೂಕಿನ ಅಪ್ರಾಳ, ಬಸವಂತಪುರ, ಹಿರೇರಾಯಕುಂಪಿ, ಚಿಕ್ಕರಾಯಕುಂಪಿ, ಗೂಗಲ್, ಗೂಗಲ್ ಬ್ರಿಡ್ಜ್ ಕಮ್ ಬ್ಯಾರೇಜ್ ಸೇರಿದಂತೆ ಶಕ್ತಿನಗರದ ಹೆಲಿಪ್ಯಾಡ್ ಈ ಎಲ್ಲಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ರಾಯಚೂರಿನ ಅಗ್ನಿಶಾಮಕ ದಳದ ಕಚೇರಿಗೆ ಭೇಟಿ ನೀಡಿ ಪ್ರವಾಹದ ಸಂದರ್ಭದಲ್ಲಿ ಉಪಯೋಗಿಸುವ ರಕ್ಷಣಾ ಸಾಮಗ್ರಿಗಳ ಬಗ್ಗೆ ಪರಿಶೀಲನೆ ನಡೆಸಿ, ಒಂದು ವೇಳೆ ಪ್ರವಾಹದ ಬಂದಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೇನಾ ಅಧಿಕಾರಿ ಅಭಯ ಕುಮಾರ್ ಹಾಗೂ ಸಂಜೀವ್ ಸಾಧುನವರ್ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ಹಾಗೂ ದೇವದುರ್ಗ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ಪರಿಣಿತರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು