ಅಬೂಬಕ್ಕರ್ ಅವರು ಯೆಮೆನ್ನಲ್ಲಿರುವ ಧಾರ್ಮಿಕ ಮುಖಂಡ ಶೇಕ್ ಹಬೀರ್ ಉಮರ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ಇದರಲ್ಲಿ ಮಹ್ದಿ ಕುಟುಂಬದ ಸದಸ್ಯರು ಭಾಗವಹಿಸಿದ್ದಾರೆ.
ನಿಮಿಷ ಮಾಡಿದ ತಪ್ಪನ್ನು ಕ್ಷಮಿಸುವುದಕ್ಕಾಗಿ ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಪ್ರಕರಣದ ಆರೋಪಿಗಳು ಪರಿಹಾರದ ರೂಪದಲ್ಲಿ ನೀಡುವ ಮೊತ್ತ ‘ಬ್ಲಡ್ ಮನಿ’ ನೀಡುವ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ, ಈ ಕುರಿತು ಇದುವರೆಗೂ ಅಧಿಕೃತ ಸಂದೇಶವು ಪ್ರಕಟಗೊಂಡಿಲ್ಲ.