Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಯಾದಗಿರಿಯಲ್ಲಿ ಗ್ರಾಮ ಪಂಚಾಯತ್‌ ಪ್ರತಿನಿಧಿಗಳ ಗೌರವಧನ ವ್ಯಪಗತ: 9 ವರ್ಷಗಳಿಂದ ನಿರ್ಲಕ್ಷ್ಯ?

ಯಾದಗಿರಿ: 2017-2018ನೇ ಸಾಲಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಆರು ತಿಂಗಳ ಮಾಸಿಕ ಗೌರವಧನ ಲೆಕ್ಕಾಧಿಕಾರಿಗಳ ತಪ್ಪಿನಿಂದ ವ್ಯಪಗತಗೊಂಡಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಜನ ಆಕ್ರೋಶ ಪತ್ರಿಕೆಗೆ ಮಾಹಿತಿ ನೀಡಿದ ಮೂಲಗಳ ಪ್ರಕಾರ, ಸುಮಾರು 2367 ಗ್ರಾಮ ಪಂಚಾಯತ್‌ ಚುನಾಯಿತ ಪ್ರತಿನಿಧಿಗಳಿಗೆ ಸೇರಬೇಕಿದ್ದ ಒಟ್ಟು ₹1,49,37,300 (ಒಂದು ಕೋಟಿ ನಲವತ್ತೊಂಬತ್ತು ಲಕ್ಷ ಮೂವತ್ತೇಳು ಸಾವಿರ ಮೂರು ನೂರು ರೂಪಾಯಿ) ಗೌರವಧನವನ್ನು ಅದೇ ಸಾಲಿನಲ್ಲಿ ಯಾದಗಿರಿ ಜಿಲ್ಲಾ ಪಂಚಾಯತಿಗೆ ಜಮೆ ಮಾಡಲಾಗಿತ್ತು. ಆದರೆ ಲೆಕ್ಕಾಧಿಕಾರಿಗಳ ನಿರ್ಲಕ್ಷ್ಯದಿಂದ ಈ ಮೊತ್ತವನ್ನು ಜಿಲ್ಲಾ ಪಂಚಾಯತಿಯ ನಿಧಿ-2 ಖಾತೆಗೆ ಜಮೆ ಮಾಡಲಾಗಿದ್ದು, ನಂತರ ಅದು ವ್ಯಪಗತಗೊಂಡಿದೆ.

ಜಿಲ್ಲೆಯಲ್ಲಿ ಅಂದಿನ ಅವಧಿಯಲ್ಲಿ 123 ಗ್ರಾಮ ಪಂಚಾಯತಿಗಳು ಇದ್ದು, 123 ಅಧ್ಯಕ್ಷರು, 123 ಉಪಾಧ್ಯಕ್ಷರು ಹಾಗೂ 2121 ಸದಸ್ಯರು ಸೇರಿ ಒಟ್ಟು 2367 ಜನರಿಗೆ ಈ ಆರು ತಿಂಗಳ ಗೌರವಧನ ಪಾವತಿಯಾಗಬೇಕಿತ್ತು. ಆದರೆ ಈ ಮೊತ್ತ ಇಂದಿನವರೆಗೂ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ದೊರಕಿಲ್ಲ ಎಂಬುದು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಸಂಬಂಧಿತ ಮೂಲಗಳ ಪ್ರಕಾರ, ಈ ಮೊತ್ತ ಸರ್ಕಾರಕ್ಕೆ ಮರಳಿರಬಹುದಾಗಿಯೂ ಅಥವಾ ಬೇರೆ ಉದ್ದೇಶಗಳಿಗೆ ಬಳಕೆಯಾಗಿರಬಹುದಾಗಿಯೂ ಅನುಮಾನ ವ್ಯಕ್ತವಾಗಿದೆ. ಹಣವನ್ನು ಮರಳಿ ಒದಗಿಸಲು 2022ರಲ್ಲಿ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದರೂ, ಅದು ಕೇವಲ ಕಾಟಾಚಾರದ ಕ್ರಮವೆಂಬ ಅನುಮಾನಗಳು ವ್ಯಕ್ತವಾಗಿವೆ.

ಈ ಕುರಿತು ಪ್ರತಿಕ್ರಿಯಿಸಿದ ಮಾಹಿತಿದಾರರೊಬ್ಬರು, “ಜನಪ್ರತಿನಿಧಿಗಳ ಶಾಸನಬದ್ದ ಹಕ್ಕುಗಳನ್ನು ಯಾದಗಿರಿ ಜಿಲ್ಲಾ ಪಂಚಾಯತಿ ದಾರುಣವಾಗಿ ಹನನ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಗೌರವಧನವನ್ನು ಬಡ್ಡಿ ಸಮೇತ ಪಾವತಿಸಬೇಕು. ಆದರೆ ಈ ಬಗ್ಗೆ ಕೇಳುವವರೇ ಇಲ್ಲದಿರುವುದು ವಿಷಾದನೀಯಎಂದು ಹೇಳಿದ್ದಾರೆ.

ಇನ್ನೊಬ್ಬರು ಪ್ರತಿಕ್ರಿಯಿಸುತ್ತಾ, “ಬಹುತೇಕ ಗ್ರಾಮ ಪಂಚಾಯತ್‌ ಸದಸ್ಯರಿಗೆ ಈ ವಿಷಯವೇ ಗೊತ್ತಿಲ್ಲ. ಗೊತ್ತಿದ್ದರೂ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಇದು ಸಣ್ಣ ಮೊತ್ತವಲ್ಲ; ಹಕ್ಕಿನ ಉಲ್ಲಂಘನೆಯಾಗಿದೆ. ಸರ್ಕಾರ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕುಎಂದು ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ ಲವೀಶ್‌ ಓರಾಡಿಯಾ ಅವರನ್ನು ಸಂಪರ್ಕಿಸಿದಾಗ, “ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆಎಂದು ತಿಳಿಸಿದ್ದಾರೆ.

ಸುಮಾರು 9 ವರ್ಷಗಳಿಂದ ಈ ಪ್ರಕರಣ ನಿರ್ಲಕ್ಷ್ಯಕ್ಕೊಳಗಾಗಿರುವುದು ಆಡಳಿತ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದ್ದು, ಜನಪ್ರತಿನಿಧಿಗಳ ಹಕ್ಕುಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.

ಈ ಘಟನೆಯಿಂದ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

                                                                                                                   ಲಕ್ಷ್ಮೀಕಾಂತ ನಾಯಕ(9845968164)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ