LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೊಗರಿ ಬೆಳೆ ನಷ್ಟದ ವಿಮೆ ಪರಿಹಾರ ರೈತರಲ್ಲಿ ಮಂದಹಾಸ.!ಶಾಸಕ ಟಿ.ರಘುಮೂರ್ತಿ

 

ಚಿತ್ರದುರ್ಗ:ತೊಗರಿ ಬೆಳೆ ನಷ್ಟದ ವಿಮೆ ಪರಿಹಾರ ದೊರಕಿದ್ದು ರೈತರಿಗೆ ಸಂತೋಷ ತಂದಿದ್ದು ನಾವು ಸದಾ ರೈತರ ಪರವಾಗಿ ಇದ್ದೇವೆ. ಇದರ ಜೊತೆಗೆ ತಾಲೂಕಿನ ಶೇಂಗಾ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಬಿಡುಗಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.

ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಶನಿವಾರ ತೊಗರಿ ಬೆಳೆಗಾರರ ಸಂಘದ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮಳೆ ಕೊರತೆಯಿಂದ ಬೆಳೆ ನಷ್ಟ ಅದ ಕೂಡಲೇ ಪ್ರತಿ ಹಂತದಲ್ಲಿ ಹೋರಾಟ ಮಾಡಿದ ಫಲವಾಗಿ ತೊಗರಿ ಬೆಳೆಗಾರರಿಗೆ ಇದೇ ಮೊದಲ ಬಾರಿಗೆ ಮಧ್ಯಂತರ ಬೆಳೆ ನಷ್ಟದ ವಿಮೆ ಹಣ ಬಿಡುಗಡೆ ಆಗಿದೆ. ಸುಮಾರು 3850 ತೊಗರಿ ಬೆಳೆಗಾರರಿಗೆ ಸುಮಾರು 3.52.87000 ರೂಗಳನ್ನು ವಿಮಾ ಕಂಪನಿಗಳಿAದ ಜಮಾ ಮಾಡಿಸಲಾಗಿದೆ.

ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆಯಲು ಪ್ರಯತ್ನಿಸಿರುತ್ತಾರೆ. ಆದರೆ ಬೆಳೆ ನಷ್ಟವಾದ ಸಂದರ್ಭದಲ್ಲಿ ಪರಿಹಾರ ದೊರೆತರೆ ರೈತರಿಗೆ ಆಸರೆಯಾಗುವ ಮೂಲಕ ಮರಳಿ ಕೃಷಿಗೆ ಸಹಕಾರಿಯಗಾಲಿದೆ ಎಂದರು.

ತೊಗರಿ ಬೆಳೆ ಮಾದರಿಯಲ್ಲಿ  ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಶೇಂಗಾ ಬೆಳೆ ನಷ್ಟದ ವರದಿ ಆಧರಿಸಿ ವಿಮೆ ಬಿಡುಗಡೆಗೆ ಸರ್ಕಾರ ಮತ್ತು ಕೃಷಿ ಸಚಿವರ ಬಳಿ ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿಇದ್ದರ

ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಸಿ. ಶಿವಲಿಂಗಪ್ಪ ಮಾತನಾಡಿ, ವಿಮಾ ಕಂಪನಿಗಳು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿವೆ. ಪ್ರಸಕ್ತ

ವರ್ಷದ ಬೆಳೆ ಹಾನಿಗೆ ವಿಮೆ ಕೊಡುವುದಾಗಿ, ಕಂತು ಕಟ್ಟಿಸಿಕೊಂಡು ಹಿಂದಿನ ಏಳು ವರ್ಷಗಳ ಬೆಳೆಯ ಸರಾಸರಿ ಇಳುವರಿಗೆ ತಾಳೆ ಮಾಡುವುದರಿಂದ ರೈತರಿಗೆ ಮೋಸವಾಗುತ್ತಿದೆ. ಈ ನಿಯಮ ಬದಲಾಗಬೇಕು ಎಂದರು.

ಬಯಲು ಸೀಮೆಯಲ್ಲಿ ಮಳೆ ನಂಬಿಕೊಂಡು ಕೃಷಿ ಮಾಡುವುದು ದುಸ್ಸಾಹಸವಾಗಿದೆ. ಶಾಸಕರ ನೆರವಿನಿಂದ ಕೃಷಿ ಸಚಿವರು ಮತ್ತು ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಹೋರಾಟ ನಡೆಸಿದ ಫಲವಾಗಿ, 3,850 ರೈತರಿಗೆ ಮಧ್ಯಂತರ ಬೆಳೆ ವಿಮೆ ಸಿಕ್ಕಿದೆ. ಶೇಂಗಾ ಬೆಳೆ ಕಳೆದುಕೊಂಡ ರೈತರಿಗೆ ವಿಮೆ ಬಿಡುಗಡೆ ಮಾಡಿಸಲು ಶಾಸಕರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ. ಮಂಜುನಾಥ್, ದಯಾನಂದ ಮೂರ್ತಿ, ಭರತೇಶ್‌ರೆಡ್ಡಿ, ವೀರಣ್ಣ, ಧನಂಜಯ ರೆಡ್ಡಿ, ಸಂದೀಪ್, ಸಿದ್ದೇಶ್ವರ ರೆಡ್ಡಿ ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026