LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿನ್ನದ ಗಣಿಗಾರಿಕೆ ಪುನರಾರಂಭಿಸಲು ಶಾಸಕ ವೀರೇಂದ್ರ ಪಪ್ಪಿ ಮನವಿ

 

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕು ಇಂಗಳದಾಳಿನಿಂದ ಈ ಹಿಂದೆ ಕೈಗೊಳ್ಳಲಾಗುತ್ತಿದ್ದ ಚಿನ್ನದ ಗಣಿಗಾರಿಕೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಈ ಕುರಿತಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಳೆದ ಸೆಪ್ಟಂಬರ್ 09 ರಂದು ಮನವಿ ಪತ್ರ ಸಲ್ಲಿಸಿದ್ದರು.  1886 ರಲ್ಲಿ ಇಂಗಳದಾಳಿನಲ್ಲಿ ತಾಮ್ರದ ಗಣಿಗಾರಿಕೆ ಪ್ರಾರಂಭವಾಗಿತ್ತು, ಬಳಿಕ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಅವರು ಕೈಗೊಂಡ ಸರ್ವೆ ಬಳಿಕ ಇಂಗಳದಾಳು, ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪವಿರುವುದನ್ನು ಗುರುತಿಸಿತ್ತು.

1972 ರಲ್ಲಿ ಇಂಗಳದಾಳು ತಾಮ್ರದ ಘಟಕ ಪ್ರಾರಂಭಗೊಂಡು, ಬಳಿಕ ಇದನ್ನು ಹಟ್ಟಿ ಚಿನ್ನದ ಗಣಿಯೊಂದಿಗೆ ವಿಲೀನಗೊಳಿಸಲಾಗಿತ್ತು.  1994 ರಲ್ಲಿ ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪ ಇರುವುದನ್ನು ಖಚಿತಪಡಿಸಿಕೊಂಡು, ಈ ಭಾಗದಲ್ಲಿ ಹಟ್ಟಿ ಚಿನ್ನದ ಗಣಿಯ ಸಹಯೋಗದಲ್ಲಿ 2002 ರವರೆಗೂ ಗಣಿಗಾರಿಕೆ ನಡೆಸಲಾಗಿತ್ತು.

ಗಣಿ ತಜ್ಞರು ಮತ್ತು ಭೂವಿಜ್ಞಾನಿಗಳು ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಉತ್ತಮ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪವಿದ್ದು, ಚಿನ್ನದ ಗಣಿಗಾರಿಕೆಗೆ ಸೂಕ್ತವಾಗಿದೆ ಎಂಬುದಾಗಿ ತಿಳಿಸಿದ್ದು, ಈ ಕುರಿತಂತೆ ಸಂಬಂಧಪಟ್ಟವರಿಂದ ಮತ್ತೊಮ್ಮೆ ಪರಿಶೀಲನೆ ನಡೆಸಿ, ಚಿತ್ರದುರ್ಗದ ಚಿನ್ನದ ಗಣಿಗಾರಿಕೆ ಘಟಕವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದರು.  ಇದೀಗ ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ ಅವರು ಕೂಡ ಸ್ಪಂದಿಸಿದ್ದು, ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಘಟಕ ಪುನರಾರಂಭಿಸಲು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಪುನರಾರಂಭಕ್ಕೆ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿರುವ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!