Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

28 ರಿಂದ ಕರುನಾಡಲ್ಲಿ ಮೋದಿ ಗರ್ಜನೆ !

 

ದೆಹಲಿ :
ಕೆಲ ತಿಂಗಳಗಳ ಹಿಂದೆಯೇ ಕರ್ನಾಟಕಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಯ ರಣಕಹಳೆ ಮೊಳಗಿಸಿದ್ದರು. ಇದೀಗ ಮತ್ತೆ ಅವರು ಆಗಮಿಸಲಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಇದೀಗ ಕಾವೇರಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಇದೀಗ ರಂಗೇರಿದೆ. ಬಿಜೆಪಿಯ ವರ್ಚಸ್ವಿ ಮುಖವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆತರಲು ಪಕ್ಷ ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಚುನಾವಣೆಗೆ ರಣಕಹಳೆ ಮೊಳಗಿಸಲು ಆಗಮಿಸಲಿದ್ದಾರೆ.

ರಾಜ್ಯಾದ್ಯಂತ ಸುಮಾರು 20 ಕ್ಕೂ ಹೆಚ್ಚು ಸಭೆ- ಸಮಾರಂಭಗಳಲ್ಲಿ ಮೋದಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪಕ್ಷದಲ್ಲಿ ಚರ್ಚೆ ನಡೆದಿದೆ. ಒಂದೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತೀವ್ರ ಪೈಪೋಟಿ ನಡೆದಿದೆ. ಹೀಗಾಗಿ ಮೋದಿ ಅವರನ್ನು ಹೆಚ್ಚು ಹೆಚ್ಚು ಪ್ರಚಾರದಲ್ಲಿ ಬಳಸಿಕೊಳ್ಳಲು ರಾಜ್ಯನಾಯಕರು ತೀರ್ಮಾನಿಸಿದ್ದಾರೆ. ಮೋದಿ ಅವರೊಂದಿಗೆ ರಾಜ್ಯ ಮತದಾರರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕರೆತಂದು ಪ್ರಚಾರದಲ್ಲಿ ಸಮರ್ಥವಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಒಟ್ಟು 10 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ಬಗ್ಗೆ ರಾಜ್ಯ ಬಿಜೆಪಿ ರಾಷ್ಟ್ರೀಯ ಘಟಕ ಮತ್ತು ಪ್ರಧಾನಮಂತ್ರಿ ಕಚೇರಿಗೆ ಈಗಾಗಲೇ ಪತ್ರ ಬರೆದಿದೆ.

ಮೇ 6 ರ ಪ್ರಧಾನಿ ಮೋದಿ ಕಾರ್ಯಕ್ರಮ :
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲ್ಕಿ ಭಾಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಮೋದಿ ಈ ಕಾರ್ಯಕ್ರಮದ ಮೂಲಕ ಈ ಭಾಗದಲ್ಲಿ ಸಂಚಲನ ಉಂಟು ಮಾಡಲಿದ್ದಾರೆ.

2018 ರಲ್ಲಿಯೂ ಮೋದಿ ಅವರು ಉಡುಪಿಯಲ್ಲಿ ಪ್ರಚಾರ ನಡೆಸಿದ ನಂತರ ಉಭಯ ಜಿಲ್ಲೆಗಳಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಅವರು ಭಾಗವಹಿಸುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ