LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಮೋಹನ್ ಕುಮಾರ್

ಶಿವಮೊಗ್ಗ,ನ. 28 : ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೋಹನ್ ಕುಮಾರ್, ಖಜಾಂಚಿ ಯಾಗಿ ಶಿವಮೊಗ್ಗ ಉಪವಿಭಾಗಾಕಾರಿ ಸತ್ಯನಾರಾಯಣ್, ರಾಜ್ಯ ಪರಿಷತ್ ಸದಸ್ಯರಾಗಿ ಸಿಡಿಪಿಓ ರಂಗನಾಥ್ ಅವರನ್ನು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಪಾಪಣ್ಣ, ಕಾರ್ಯಾ ಧ್ಯಕ್ಷರಾಗಿ ಡಾ|| ಹಿರೇಮಠ್ ಗೌರವಾಧ್ಯಕ್ಷ ರಾಗಿ ನರಸಿಂಹಮೂರ್ತಿ, ಹಿರಿಯ ಉಪಾಧ್ಯಕ್ಷರಾಗಿ ದಿನೇಶ್, ರವಿ, ಸುಮತಿ ಇವರುಗಳು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಜಿಲ್ಲಾ ಘಟಕದ ನಿರ್ದೇಶಕರ ಸ್ಥಾನಕ್ಕೆ ಈಚೆಗಷ್ಟೇ ಚುನಾವಣೆ ನಡೆದಿತ್ತು. ಒಟ್ಟು 66 ಮಂದಿ ನಿರ್ದೇಶಕರ ಪೈಕಿ 38 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 28 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಹಿರಿಯ ನೌಕರರ ಮೋಹನ್‌ಕುಮಾರ್, ಸತ್ಯನಾರಾಯಣ, ಸಿಡಿಪಿಓ ರಂಗನಾಥ್ ಅವರು ಸೇರಿ ಉಳಿದವರು ಆಯ್ಕೆಯಾಗಿದ್ದರು.

ಚುನಾವಣೆ ಬಳಿಕ ಜಿಲ್ಲಾ ಘಟಕದ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ಡಿಸೆಂಬರ್ ೪ಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ ನ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಈ ಸಂದರ್ಭದಲ್ಲಿ ಮೇಲಿನ ಮೂವರೇ ತಮ್ಮ ತಮ್ಮ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಇವರುಗಳ ಆಯ್ಕೆ ಅವಿರೋಧವಾಗಿ ನಡೆಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ಮಾರ್ಗ ದರ್ಶನದಲ್ಲಿ ಜಿಲ್ಲೆಯ ನೌಕರರಲ್ಲಿ ಯಾವುದೇ ಭಿನ್ನ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನೌಕರರ ಹಿತಕ್ಕಾಗಿ ಶ್ರಮಿ ಸಲು ಇಚ್ಚಿಸುವ ಆಸಕ್ತರನ್ನು ಗುರುತಿಸಿ, ಈ ಹಿಂದೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ವಿವಿಧ ಇಲಾಖೆಗಳ 38 ಸದಸ್ಯರು ಅವಿರೋಧ ವಾಗಿ ಹಾಗೂ 28 ಸದಸ್ಯರು ಚುನಾವಣೆ ಮೂಲಕ ಆಯ್ಕೆಗೊಂಡಿದ್ದರು. ಈ ಎರಡೂ ಹಂತದಲ್ಲಿಯೂ ಸಿ.ಎಸ್. ಷಡಾಕ್ಷರಿ ಬೆಂಬಲಿತ ಅಭ್ಯರ್ಥಿಗಳೇ ಮೇಲುಗೈ ಸಾಸಿದ್ದರು. ಇದೀಗ ಜಿಲ್ಲೆಯ ಪದಾಧಿಕಾರಿಗಳಿಗೆ ಅವಿರೋಧ ಆಯ್ಕೆ ಯಾಗುವ ಮೂಲಕ ಸಂಘದಲ್ಲಿ ಯಾವುದೇ ಬಣವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ನೌಕರರ ಸಂಘದಲ್ಲಿ ಬಣಗಳೆ ಇಲ್ಲ .ನೌಕರರೇ ಎಲ್ಲಾ ಇದು ರಾಜ್ಯದ ಸರ್ಕಾರಿ ನೌಕರರ ಧ್ಯೇಯ ವಾಕ್ಯ.ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಪರಂಪರೆ ಮುಂದುವರೆದಿರುವುದು ಖುಷಿ ತಂದಿದೆ.2019 ರಲ್ಲಿಯು ನನ್ನನ್ನು ನೌಕರರು ಅವಿರೋಧವಾಗಿ ಆಯ್ಕೆ ಮಾಡಿದ್ದರು. ಅದೇ ಪರಂಪರೆ ಈ ಬಾರಿಯೂ ಮುಂದುವರೆದಿದೆ. ಮೋಹನ್ ಕಷ್ಟ ಸುಖಗಳಿಗೆ ಸ್ಪಂದಿಸಿದ್ದಾರೆ.ರಾಜ್ಯ ಘಟಕದ ಉಪಾಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದಾರೆ.ಜಿಲ್ಲೆಯ ಎಲ್ಲಾ ನೌಕರರ ಅಪೇಕ್ಷೆಯಂತೆ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಇವರು ಸಂಘದ ಪರವಾಗಿ ಮತಷ್ಟು ಕೆಲಸ ಮಾಡಲಿ.
-ಸಿಎಸ್ ಷಡಾಕ್ಷರಿ,
ರಾಜ್ಯಾಧ್ಯಕ್ಷರು
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದಲ್ಲಿ ಸಂಘದ ಎಲ್ಲ ನೂತನ ನಿರ್ದೇಶಕರು, ತಾಲೂಕು ಅಧ್ಯಕ್ಷರ ಒಪ್ಪಿಗೆ ಜೊತೆಗೆ ಜಿಲ್ಲಾ ನೌಕರರ ಬೆಂಬಲದೊಂದಿಗೆ ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ ಕೆಲಸ ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಈಗ ನಮ್ಮ ಮುಂದೆ ಅನೇಕ ಸವಾಲುಗಳಿವೆ.  ಎನ್‌ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಎನ್ನುವ ಬೇಡಿಕೆಯೂ ಇದೆ. ಇದೆನ್ನೆಲ್ಲ ಸಮರ್ಥವಾಗಿ ನಿಭಾಯಿಸುವ ಹೊಣೆಗಾರಿಕೆ ಇದೆ. ಇದಕ್ಕೆ ಎಲ್ಲರ ಸಹಕಾರ ಬೇಕಿದೆ.
-ಆರ್.ಮೋಹನ್‌ಕುಮಾರ್,
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST