LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ: ಮೋಹನ್ ಕುಮಾರ್





ಬಳ್ಳಾರಿ,ಜ.30

ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವ ಸಂಬAಧವಿರದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾ ಸಾಹೇಬ ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲರಾದ ಎಚ್.ಮೋಹನ್ ಕುಮಾರ್ ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಮೈಸೂರಿನ ಸಮಾಜ ಕಾರ್ಯಕರ್ತರ ಕ್ರಿಯಾ ಸಂಶೋಧನೆ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಂಬೇಡ್ಕರ ಅವರ ಬರಹಗಳು ಮತ್ತು ಭಾಷಣಗಳ ಮೂಲಕ ಭಾರತೀಯರನ್ನು ಅರ್ಥಮಾಡಿಕೊಳ್ಳುವಿಕೆ’ ಎಂಬುದರ ಕುರಿತಾದ ಮೂರು ದಿನಗಳ ಕಾರ್ಯಾಗಾರವನ್ನು ಅಂಬೇಡ್ಕರ್ ಹಾಗೂ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದಲ್ಲಿ ಪ್ರಸ್ತುತವಾಗಿ ಅಂಬೇಡ್ಕರ ಅವರ ಕುರಿತು ಚಿಂತನೆಗಳು ಬಹಳ ಕ್ರಿಯಾಶೀಲವಾಗಿವೆ. ಮನುಷ್ಯನು ಇನ್ನೊಬ್ಬರ ಘನತೆಯನ್ನು ಅಳೆಯುವುದರಲ್ಲಿ ತಲ್ಲೀನನಾಗಿದ್ದಾನೆ. ಪ್ರಜಾಪ್ರಭುತ್ವ ಕೇವಲ ಹೊಗಳಿಕೆಯಾಗಿ ಉಳಿದಿದೆ. ಇವತ್ತು ಪ್ರಾಣಿಗಳ ಮೇಲೆ ಕಾಣುವ ಪ್ರೀತಿ, ಸಹೋದರತೆ, ವಿಶ್ವಾಸವನ್ನು ಮನುಷ್ಯರಲ್ಲಿ ಕಾಣಲಾರೆವು ಎಂದು ಅಭಿಪ್ರಾಯಪಟ್ಟರು.

ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀನಿವಾಸ ಡಿ.ಮನಗಳ್ಳಿ ಅವರು ಮಾತನಾಡಿ, ಅಂಬೇಡ್ಕರ ಅವರ ಅಧ್ಯಯನ ಕೇಂದ್ರಗಳು ತರಬೇತಿ ಕೇಂದ್ರಗಳಾಗಬೇಕಾಗಿದೆ. ಸಮಾಜದಲ್ಲಿನ ಜಾತಿ ವ್ಯವಸ್ಥೆ ಭಾರತದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರು ಮತ್ತು ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬರ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಎಸ್ಸಿ-ಎಸ್ಟಿ ಕೋಶ ಹಾಗೂ ಅಂಬೇಡ್ಕರ ತರಬೇತಿ ಕೇಂದ್ರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಲಂಡನ್‌ನ ಸಾಮಾಜಿಕ ಮತ್ತು ಸಾಂಸ್ಕೃತಿಕ ಮನೋವಿಜ್ಞಾನ ಚಿಂತಕರಾದ ಚಾರುಮತಿ.ಎಂ ವೇದಿಕೆಯಲ್ಲಿದ್ದರು. ಎಸ್ಸಿ-ಎಸ್ಟಿ ಕೋಶದ ನಿರ್ದೇಶಕ ಡಾ.ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅನಿಲ ವಂದಿಸಿದರು.

ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು