Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೇರಳಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ತಿರುವನಂತಪುರಂ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ದೃಢಪಡಿಸಿದೆ. ಇದು ವಾಡಿಕೆಗಿಂತ ಮೂರು ದಿನ ವಿಳಂಬವಾಗಿದೆ.

ಮುಂಗಾರು ಮಾರುತಗಳ ಆಗಮನದಿಂದಾಗಿ ಕೇರಳ ಮತ್ತು ಲಕ್ಷದ್ವೀಪದಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.
ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದ 2 ರಿಂದ 3 ದಿನಗಳಲ್ಲಿ (ಅಂದರೆ ಜೂನ್ ಮೊದಲ ವಾರದ ಅಂತ್ಯದೊಳಗೆ) ಮುಂಗಾರು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಪ್ರವೇಶಿಸುತ್ತದೆ. ಜೂನ್ ಎರಡನೇ ವಾರದ ಆರಂಭದ ವೇಳೆಗೆ ಮುಂಗಾರು ಮಾರುತಗಳು ಇಡೀ ಕರ್ನಾಟಕವನ್ನು ವ್ಯಾಪಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಜೂನ್ 4 ರಿಂದ ಜೂನ್ 9 ರ ಅವಧಿಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಕನಿಷ್ಠ 7 ಸೆಂಟಿಮೀಟರ್‌ನಿಂದ ಗರಿಷ್ಠ 20 ಸೆಂಟಿಮೀಟರ್‌ವರೆಗೆ ದಾಖಲೆ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ತೀವ್ರ ಮಳೆ ಮತ್ತು ಸಾರ್ವಜನಿಕ ಜೀವನಕ್ಕೆ ಉಂಟಾಗಬಹುದಾದ ಅಡಚಣೆಗಳನ್ನು ಪರಿಗಣಿಸಿ, ಗುರುವಾರದಂದು ರಾಜ್ಯದ ಪ್ರಮುಖ 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದ ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಹಾಗೂ ತ್ರಿಶೂರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವುದರಿಂದ ಆರೆಂಜ್‌ ಅರ್ಟ್‌ ಘೋಷಿಸಲಾಗಿದೆ.
ಉತ್ತರ ಕೇರಳದತ್ತ ಮುನ್ನಡೆಯಲಿರುವ ಮಳೆ:
ಈ ಹಿಂದೆ ಹವಾಮಾನ ಇಲಾಖೆ ಮೇ 26ರಂದು ಮುಂಗಾರು ಕೇರಳವನ್ನು ತಲುಪಲಿದೆ ಎಂದು ಅಂದಾಜಿಸಿತ್ತು. ನಂತರ ಜೂನ್‌ 1ರಂದು ಪ್ರವೇಶಿಸಲಿದೆ ಎಂದು ಹೇಳಿತ್ತು. ಆದರೆ ವಿವಿಧ ಹವಾಮಾನ ಕಾರಣಗಳಿಂದ ಅದರ ಆಗಮನದಲ್ಲಿ ವಿಳಂಬ ಉಂಟಾಯಿತು.ನಂತರ ಜೂನ್‌ 4-5ರಂದು ಪ್ರವೇಶಿಸಲಿದೆ ಎಂದು ಹೇಳಿತ್ತು.  ಮುಂಬರುವ ದಿನಗಳಲ್ಲಿ ಮುಂಗಾರು ಮಾರುತಗಳ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಮಳೆಯು ಕ್ರಮೇಣ ಉತ್ತರ ಕೇರಳದತ್ತ ಮುಖ ಮಾಡಲಿದೆ. ವಾರದ ಉತ್ತರಾರ್ಧದಲ್ಲಿ ರಾಜ್ಯಾದ್ಯಂತ ಮುಂಗಾರು ಪರಿಸ್ಥಿತಿ ಬಲಗೊಳ್ಳುತ್ತಿದ್ದಂತೆ ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ