K2kannadanews.in
[video width="640" height="360" mp4="https://k2kannadanews.in/wp-content/uploads/2024/10/sHOIxrB_7MR_jibR.mp4"][/video]
Fireworks mishap ಕಾಸರಗೋಡು : ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 8 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿ ಸೋಮವಾರ ತಡರಾತ್ರಿ ಸುಮಾರು 12.30 ರ ವೇಳೆಗೆ ಅಂಜುತಂಬಲಂ ವೀರರ್ಕಾವು ದೇವಸ್ಥಾನದಲ್ಲಿ ವಾರ್ಷಿಕ ಕಲಿಯಾಟಂ ಉತ್ಸವ ನಡೆಯುತ್ತಿತ್ತು. ಉತ್ಸವದಲ್ಲಿ ಸೇರಿದ್ದ ಜನರ ಮೇಲೆ ಪಟಾಕಿ ಕಿಡಿ ಸಿಡಿದಿದೆ. ಕೆಲವರ ಮೈಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
https://youtu.be/uOmt49nI7tI?si=YeFcXF5FUjEwEJkh
ಘಟನೆಯಲ್ಲಿ ಗಾಯಗೊಂಡವರನ್ನು ನೀಲೇಶ್ವರಂ ಮತ್ತು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಯಿಂದ ಗೋದಾಮಿನ ಗೋಡೆಗಳು ಛಿದ್ರಗೊಂಡವೆ.