Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಚಿತ್ರದುರ್ಗಕ್ಕೆ ಕೇಂದ್ರೀಯ ವಿದ್ಯಾಶಾಲೆ ಮಂಜೂರು: ಸಂಸದ ಕಾರಜೋಳ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆ ಶೈಕ್ಷಣಿಕವಾಗಿ ಅತಿ ಹಿಂದುಳಿದ ಜಿಲ್ಲೆಯನ್ನು ಭೌತಿಕವಾಗಿ ಅಭಿವೃದ್ದಿಗೊಳಿಸಲು ಸಾಕಷ್ಟು ದಾರಿಗಳಿವೆ, ಕೆ.ಎಂ.ಇ.ಆರ್.ಸಿ. ಯಂತಹ ಸಾಕಷ್ಟು ಅನುದಾನದ ಮೂಲಗಳಿವೆ. ಆದರೆ, ಚಿತ್ರದುರ್ಗ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತರಲು ಹಲವಾರು ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಜೊತೆಗೆ ಗುಣಮಟ್ಟದ ಶಿಕ್ಷಣ ದೊರಕುವುದು ಅತ್ಯಂತ ಅಗತ್ಯವಾಗಿದೆ. ಇದಕ್ಕೆ ಪೂರಕವೆಂಬಂತೆ ಜಿಲ್ಲೆಯ ಜನರಿಗೆ ಅಗತ್ಯವಾಗಿ ಬೇಕಾಗಿದ್ದ ಕೇಂದ್ರೀಯ ವಿದ್ಯಾಶಾಲೆಯನ್ನು ಮಂಜೂರು ಮಾಡಿಸಿದ್ದೇನೆ.

ಈ ಹಿಂದಿನ ಲೋಕಸಭಾ ಸದಸ್ಯರಾಗಿದ್ದ ನಾರಾಯಣ ಸ್ವಾಮಿಯವರು ಕೇಂದ್ರೀಯ ವಿದ್ಯಾಶಾಲೆಗೆ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದರು, ಆದರೆ, ಕಳೆದ ಎರಡೂವರೆ ವರ್ಷಗಳಿಂದ ಈ ವಿಷಯ ನೆನೆಗುದಿಗೆ ಬಿದ್ದಿತ್ತು. ನಾನು ಲೋಕಸಭಾ ಸದಸ್ಯನಾದ ಮೇಲೆ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಇದ್ದ ಅಡೆ ತಡೆಗಳನ್ನು ಸರಿಪಡಿಸಿ ಜೂನ್ ೨೦೨೪ ರಂದು ಕೆಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್‌ರವರಿಗೆ  ಮರು ಪ್ರಸ್ತಾಪನೆ ಸಲ್ಲಿಸಿ ಮಂಜೂರಾತಿಗೆ ಮನವಿ ಮಾಡಿದ್ದೆ, ಇದಲ್ಲದೇ ಕಳೆದ ಜುಲೈ-22ರಂದು ಪ್ರಥಮ ಲೋಕಸಭಾ ಅಧಿವೇಶನದಲ್ಲಿಯೇ  ಚಿತ್ರದುರ್ಗ ಜಿಲ್ಲೆಗೆ ಕೇಂದ್ರೀಯ ವಿದ್ಯಾಶಾಲೆ ಮಂಜೂರು ಮಾಡುವಂತೆ ಪ್ರಶ್ನೆ ಕೇಳುವ ಮೂಲಕ ಧ್ವನಿ ಎತ್ತಿದ್ದೆ.

ಇದಕ್ಕೆ ಪೂರಕವೆಂಬಂತೆ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚಿತ್ರದುರ್ಗದಲ್ಲಿ  ಕೇಂದ್ರೀಯ ವಿದ್ಯಾಶಾಲೆ ಸ್ಥಾಪನೆಗೆ ಮಂಜೂರಾತಿ ದೊರಕಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಶಾಲೆ ಸ್ಥಾಪನೆಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್‌ರವರಿಗೆ ಚಿತ್ರದುರ್ಗ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

೨೦೨೫-೨೬ ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಚಿತ್ರದುರ್ಗದ ಕೇಂದ್ರೀಯ ವಿದ್ಯಾಶಾಲೆ ಕಾರ್ಯರಾಂಭ ಮಾಡಲಿದೆ. ತಾತ್ಕಾಲಿಕವಾಗಿ ಶಾಲೆ ನಡೆಸಲು ಈಗಾಗಲೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಲೋಕಸಭಾ ಅಧಿವೇಶನ ಮುಗಿದ ತಕ್ಷಣ ಕೇಂದ್ರೀಯ ವಿದ್ಯಾಶಾಲೆಯ ಬೆಂಗಳೂರಿನ ಸಹಾಯಕ ಆಯುಕ್ತರನ್ನು ಕರೆಸಿ ಚರ್ಚೆ ನಡೆಸುವುದಾಗಿ ಸಂಸದರು ತಿಳಿಸಿದ್ದಾರೆ.    

ಚಿತ್ರದುರ್ಗ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರುವ ಪ್ರಯತ್ನದಲ್ಲಿ ಇದು ಮೊದಲ ಯಶಸ್ಸು ಎಂದು ನಾನು ಭಾವಿಸಿದ್ದೇನೆ, ಇದರ ಜೊತೆಗೆ ಈಗಾಗಲೇ ಅತಿ ಹೆಚ್ಚು ಪರಿಶಿಷ್ಟ ಪಂಗಡದವರು ವಾಸ ಮಾಡುತ್ತಿರುವ ಚಳ್ಳಕೆರೆ ಬ್ಲಾಕ್‌ಗೆ ಕೇಂದ್ರ ಸರ್ಕಾರದ ಬುಡಕಟ್ಟು ಸಚಿವಾಲಯದಿಂದ ಏಕಲವ್ಯ ಮಾದರಿ ವಸತಿ ಶಾಲೆಯನ್ನು ತರಲು ಸಚಿವರಾದ ವೀರೇಂದ್ರ ಕುಮಾರ್‌ರವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ, ಇದಕ್ಕೆ ಅಗತ್ಯವಾಗಿ ಬೇಕಾಗಿರುವ ೧೫ ಎಕರೆ ಸರ್ಕಾರಿ ಜಮೀನನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಇದರ ಜೊತೆಗೆ, ಕೇಂದ್ರ ಸಂಸ್ಕೃತಿ ಸಚಿವಾಲಯದಿಂದ ಚಿತ್ರದುರ್ಗದಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ತೆರೆಯಲು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್‌ರವರಿಗೆ ಮನವಿ ಮಾಡಿದ್ದೇನೆ. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಯಿಂದ ಈ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಇದಕ್ಕೆ ಅಗತ್ಯವಾಗಿರುವ ಎರಡು ಎಕರೆ ಜಮೀನನ್ನು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಚಿತ್ರದುರ್ಗ ಜಿಲ್ಲೆಗೆ ಇನ್ನೊಂದು ನವೋದಯ ವಿದ್ಯಾ ಶಾಲೆ ತರುವ ಅವಕಾಶ ಇದೆ,

ಸತತ ಮೂರು ವರ್ಷ ೧೦ ಸಾವಿರ ವಿದ್ಯಾರ್ಥಿಗಳು ನವೋದಯ ವಿದ್ಯಾಶಾಲೆ ಪ್ರವೇಶ ಪರೀಕ್ಷೆ ಬರೆಯಲು ನೊಂದಣಿ ಮಾಡಿಸಬೇಕು. ಈ ರೀತಿ ನೊಂದಣಿ ಮಾಡಿಸಿದರೆ ಜಿಲ್ಲೆಗೆ ಇನ್ನೊಂದು ನವೋದಯ ವಿದ್ಯಾಶಾಲೆ ಮಂಜೂರಾಗಲಿದೆ. ಈ ಬಗ್ಗೆ ಕೂಡ ಕಾರ್ಯೋನ್ಮುಖನಾಗಲಿದ್ದೇನೆ ಎಂದು ಕಾರಜೋಳ ತಿಳಿಸಿದ್ದಾರೆ.

ಒಟ್ಟಾರೆ ಶೈಕ್ಷಣಿಕವಾಗಿ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾಯಕಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದೇನೆ. ಈ ಜಿಲ್ಲೆಯ ಜನರನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರದೇ ಇದ್ದರೆ ಯಾವುದೇ ಪ್ರಯೋಜನವಿಲ್ಲ ಎಂಬುದನ್ನು ನಾನು ಮನಗಂಡಿದ್ದೇನೆ. 

ಈ ಮೂಲಕ ಜನರಿಗೆ ಅವರು ಬಯಸಿದ್ದನ್ನು ನೀಡುವುದಕ್ಕಿಂತ ಅವರಿಗೆ ಅಗತ್ಯವಾಗಿದ್ದನ್ನು ನೀಡುವುದರ ಕಡೆಗೆ ನಾನು ಆದ್ಯತೆ ನೀಡುತ್ತಿದ್ದೇನೆ. ಅಭಿವೃದ್ದಿಯ ವಿಷಯದಲ್ಲಿ ನನ್ನ ಪ್ರಯತ್ನ ನಿರಂತರವಾಗಿರಲಿದೆ ಎಂದು ಸಂಸದ ಗೋವಿಂದ ಕಾರಜೋಳ ಭರವಸೆ ನೀಡಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ