
ಚಿಕ್ಕಬಳ್ಳಾಪುರದ ಚುಂಚನಗಿರಿ ಮಠದಲ್ಲಿ ನಡೆದ ಕಡಲೆಕಾಯಿ ಪರಿಷೆಯಲ್ಲಿ ರಕ್ಷಾ ರಾಮಯ್ಯ ಭಾಗವಹಿಸಿ ಜನ ಸಾಮಾನ್ಯರ ಜೊತೆ ಸಮಾಲೋಚನೆ ನಡೆಸಿದರು.
ನಂತರ ಮಾತನಾಡಿದ ರಕ್ಷಾ ರಾಮಯ್ಯ, ಆದಿಚುಂಚನಗಿರಿ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧ ಹೊಂದಿದೆ. ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಆಧ್ಯಾತ್ಮಿಕ ಚಟುವಟಿಕೆ ಜೊತೆಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬಗ್ಗೆಯೂ ಆಳವಾದ ಜ್ಞಾನ ಹೊಂದಿದ್ದಾರೆ ಎಂದರು.