LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿ ನಾಯಿಗಳ ನಿಯಂತ್ರಣಕ್ಕೆ ಪುರಸಭೆ ಕ್ರಮ : ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟ

ಶಿವಮೊಗ್ಗ : ಶಿಕಾರಿಪುರ ಪಟ್ಟಣದಲ್ಲಿ ಬೀದಿ ನಾಯಿಗಳ ನಿಯಂತ್ರಣ ಹಾಗೂ ಇತ್ತೀಚೆಗೆ ನಡೆದ ನಾಯಿ ಕಡಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶದಂತೆ, ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರಚಿಕಿತ್ಸೆ(ಎಬಿಸಿ) ನಡೆಸಿ, ಆರೈಕೆ ಮಾಡಿದ ನಂತರ ಅವುಗಳನ್ನು ಯಾವ ಸ್ಥಳದಿಂದ ಹಿಡಿಯಲಾಗಿದ್ದಿತೋ ಅದೇ ಸ್ಥಳಕ್ಕೆ ಮರಳಿ ಬಿಡಲು ನಿಯಮಗಳನ್ನು ರೂಪಿಸಲಾಗಿದೆ.

ಇದರನ್ವಯ ಶಿಕಾರಿಪುರ ಪುರಸಭೆಯಿಂದ 2024-25ನೇ ಸಾಲಿನಲ್ಲಿ 711 ಬೀದಿ ನಾಯಿಗಳಿಗೆ ಹಾಗೂ 2025-26ನೇ ಸಾಲಿನಲ್ಲಿ 110 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಪ್ರಸಕ್ತ 2026-27ನೇ ಸಾಲಿನಲ್ಲಿಯೂ ಎಬಿಸಿ ಪ್ರಕ್ರಿಯೆ ನಡೆಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರಸ್ತುತ ಇದು ಅನುಷ್ಠಾನದ ಹಂತದಲ್ಲಿದೆ ಎಂದು ಪುರಸಭೆ ತಿಳಿಸಿದೆ.

ಪರಿಹಾರ ವಿತರಣೆ:

ದಿನಾಂಕ 21-05-2026 ರಂದು ಶಿಕಾರಿಪುರ ಪಟ್ಟಣದ ಚನ್ನಕೇಶವನಗರದ 6ನೇ ಕ್ರಾಸ್ ಹಾಗೂ ವಿನಾಯಕನಗರದ 8ನೇ ಕ್ರಾಸ್‌ನಲ್ಲಿ ಇಬ್ಬರು ಮಕ್ಕಳಿಗೆ ಬೀದಿ ನಾಯಿ ಕಚ್ಚಿದ ಪ್ರಕರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯು ತಕ್ಷಣವೇ ಸ್ಪಂದಿಸಿ, ನೊಂದ ಮಕ್ಕಳ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದೆ. ಅಲ್ಲದೆ, ಮಕ್ಕಳಿಗೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದು, ಸರ್ಕಾರದ ಆದೇಶದಂತೆ ತಲಾ 5,000/- ರೂ.ಗಳ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:

ಬೀದಿ ನಾಯಿಗಳ ಹಾವಳಿ ಮತ್ತು ನಾಯಿ ಕಡಿತದ ಪ್ರಕರಣಗಳಿಂದ ಮುಕ್ತಿ ಪಡೆಯಲು ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ಪದಾರ್ಥಗಳನ್ನು ಹಾಕಬಾರದು.

ಪುರಸಭೆಯಿಂದ ನಿಗದಿಪಡಿಸಲಾದ ನಿಗದಿತ ಸ್ಥಳಗಳಲ್ಲಿ ಮಾತ್ರ ಆಹಾರ ಪದಾರ್ಥಗಳನ್ನು ಹಾಕಬೇಕು.

ಸಣ್ಣ ಮಕ್ಕಳು ಮತ್ತು ವಯೋವೃದ್ಧರನ್ನು ಒಂಟಿಯಾಗಿ ಬಿಡದೆ, ಸುರಕ್ಷಿತವಾಗಿ ನೋಡಿಕೊಳ್ಳಬೇಕು.

ಸಾಕು ನಾಯಿಗಳ ಮಾಲೀಕರು ಶಿಕಾರಿಪುರ ಪುರಸಭೆಯಿಂದ ಕಡ್ಡಾಯವಾಗಿ ಅನುಮತಿ (ಲೈಸೆನ್ಸ್) ಪಡೆಯಬೇಕು.

ಈ ಮೇಲ್ಕಂಡ ನಿಯಮಗಳನ್ನು ಪಾಲಿಸಿ, ನಾಯಿ ಕಡಿತದ ಪ್ರಕರಣ ಮುಕ್ತ ಪಟ್ಟಣವನ್ನಾಗಿಸಲು ಸಾರ್ವಜನಿಕರು ಶಿಕಾರಿಪುರ ಪುರಸಭೆಯೊಂದಿಗೆ ಕೈಜೋಡಿಸಬೇಕಾಗಿ ಶಿಕಾರಿಪುರ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ