LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಸೂಯೆಯಿಂದ 4 ಮಕ್ಕಳ ಕೊಂದ ಕೊಲೆಗಾತಿ ..!!

ತನಗಿಂತ ಸುಂದರವಾಗಿ ಯಾರೂ ಇರಬಾರದು ಎನ್ನುವ ಹುಚ್ಚು ಅಸೂಯೆಯಿಂದ ಮಹಿಳೆಯೊಬ್ಬಳು ನಾಲ್ಕು ಮಂದಿ ಮಕ್ಕಳನ್ನು ಕೊಲೆಗೈದ ಆಘಾತಕಾರಿ ಘಟನೆಯೊಂದು ಹರಿಯಾಣದಲ್ಲಿ ನಡೆದಿದೆ.

ಆರು ವರ್ಷದ ಬಾಲಕಿಯನ್ನು ಕೊಂದ ಆರೋಪದಡಿ ಪಾಣಿಪತ್ ಜಿಲ್ಲೆಯ ನೌಲ್ತಾ ಗ್ರಾಮದ ಮಹಿಳೆ ಪೂನಂ (35) ಎಂಬಾಕೆಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆಘಾತಕಾರಿಯೆಂದರೆ, ವಿಚಾರಣೆಯಲ್ಲಿ ಪೂನಂ ಈ ಕೊಲೆ ಮಾತ್ರವಲ್ಲ ತನ್ನ ಸ್ವಂತ ಮಗ ಸೇರಿದಂತೆ ಇನ್ನೂ ಮೂವರು ಮಕ್ಕಳನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಇದರಿಂದ ಆಕೆ ಹೇಳಿದ್ದನ್ನು ಕೇಳಿ ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ. ಸೋನಿಪತ್ ಮೂಲದ ಆರು ವರ್ಷದ ವಿಧಿ ತನ್ನ ಕುಟುಂಬದೊ೦ದಿಗೆ ಸಂಬ೦ಧಿಕರ ಮದುವೆಗೆ ಪಾಣಿಪತ್‌ನ ನೌಲ್ತಾ ಗ್ರಾಮಕ್ಕೆ ಬಂದಿದ್ದಳು. ಸೋಮವಾರ ಮಧ್ಯಾಹ್ನ ಮದುವೆ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದಾಗ ವಿಧಿ ಕಾಣೆಯಾಗಿದ್ದಾಳೆ. ಒಂದು ಗಂಟೆಯ ನಂತರ ಅವಳ ಅಜ್ಜಿ ಓಂವತಿ ಮನೆಯ ಮೊದಲ ಮಹಡಿಯಲ್ಲಿರುವ ಅಂಗಡಿಯ ಕೋಣೆಯನ್ನು ತೆರೆದಾಗ ವಿಧಿಯ ಶವ ಮರೆಮಾಚಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಧಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ವಿಧಿಯ ತಂದೆ ಸಂದೀಪ್ ಪೊಲೀಸ್ ಠಾಣೆಯಲ್ಲಿ ಕೊಲೆ ಆರೋಪದಡಿ ದೂರು ದಾಖಲಿಸಿದರು. ಪಾಣಿಪತ್ ಎಸ್‌ಪಿ ಭೂಪೇಂದ್ರ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಿದಾಗ ಆಘಾತಕಾರಿ ಸತ್ಯ ಬಯಲಾಗಿದೆ.  ತನಗಿಂತ ಸುಂದರ ಮಕ್ಕಳು ಬದುಕಬಾರದು ಎಂಬ ಕ್ರೂರ ಮನೋಭಾವದಿಂದ ವಿಧಿಯನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೇ 2023ರಲ್ಲಿ ತನ್ನ ಅತ್ತಿಗೆಯ ಮಗಳನ್ನು ಕೊಲೆ ಮಾಡಿದ್ದಾಳೆ. ಆಕೆ ತುಂಬಾ ಸುಂದರಿಯಾಗಿದ್ದಳು ಎಂಬ ಕಾರಣಕ್ಕೆ. ಅದೇ ವರ್ಷ ತನ್ನ ಸ್ವಂತ ಮಗನನ್ನು ನೀರಿನಲ್ಲಿ ಮುಳುಗಿಸಿ ಯಾವುದೇ ಅನುಮಾನ ಬರದಂತೆ ಕೊಲೆ ಮಾಡಿದ್ದಾಳೆ. 2025 ಆಗಸ್ಟ್ನಲ್ಲಿ ಸಿವಾ ಗ್ರಾಮದ ಮತ್ತೊಂದು ಬಾಲಕಿಯನ್ನು ತನಗಿಂತ ಸುಂದರವಾಗಿ ಕಾಣುತ್ತಿದ್ದಳು ಎಂಬ ಕಾರಣಕ್ಕೆ ಕೊಲೆ ಮಾಡಿದ್ದಾಳೆ. ಈಗ ಆರು ವರ್ಷದ ವಿಧಿಯನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026