LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!

ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪಿಎಫ್‌ಐ ಕಾನೂನು ಬಾಹಿರ ಸಂಘಟನೆಯೆಂದು 28-09-2022 ರಂದು ಭಾರತ ಸರ್ಕಾರ ಘೋಷಣೆ ಮಾಡಿತ್ತು. ಇದರ ಅರಿವಿದ್ದರೂ, ಹಳೆಯ ಪಿಎಫ್‌ಐ ಪ್ರಮುಖರ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಅ.9ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಸಾಮಾಜಿಕ ಜಾಲತಾಣ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ ಪಿಎಫ್ಐ ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿದ್ದ. ಅಲ್ಲದೇ ಈ  ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿದ್ದ. ಸೈಯದ್ ಇಬ್ರಾಹಿಂ ನಿಷೇಧಿತ ಸಂಘಟನೆ ಪರವಾಗಿ ಕೃತ್ಯವೆಸಗಿದ್ದರಿಂದ, ಸ್ವಯಂ ದೂರನ್ನು ಪಡೆದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 113/2025 U/s 10 (a), (i), 13, 18 UAPA Act ರಂತೆ ದಾಖಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದು, ಆತನ ವಶದಲ್ಲಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಾಗಿದೆ. ಸದ್ಯ ಆರೋಪಿಯನ್ನು 49ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಲಯ ಮತ್ತು ಎನ್‌.ಐ.ಎ. ಪ್ರಕರಣಗಳ ವಿಶೇಷ ನ್ಯಾಯಾಲಯ ಬೆಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು, ಆರೋಪಿಗೆ ಅ.24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026