LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ.!

 

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ತೀವ್ರ ಅಸಮಾಧಾನಗೊಂದು ಸ್ವಪಕ್ಷದ ವಿರುದ್ಧವೇ ಸಿದಿದೆದ್ದಿದ್ದ ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಾದಿ ಪೈಲಾನ್ ಮನವೊಲಿಕೆ ಮಾಡುವಲ್ಲಿ ಯಶ್ವಿಯಾಗಿದ್ದು, ಚುನಾವಣಾ ಕಣದಿಂದಲೇ ಸಾದಿಕ್ ಪೈಲ್ವಾನ್ ನಿವೃತ್ತಿ ಘೋಷಿಸಿದ್ದಾರೆ.

ಈ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಗೆ ಮುಸ್ಲಿಂ ಮುಖಂಡರಿಂದ ಎದುರಾಗಿದ್ದ ತೊಡಕು ನಿವಾರಣೆಯಾದಂತಾಗಿದ್ದು, ಸಮಸ್ಯೆ ಬಗೆಹರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಮತೆ ನಡೆಸಿದ ಬಳಿಕ ಸಾದಿಕ್ ಪೈಲ್ವಾನ್ ಜೊತೆ ನಡೆಸಿದ ಸಂಧಾನ ಸಭೆ ಸಫಲವಾಗಿದ್ದು, ಚುನಾವಣಾ ಕಣದಿಂದಲೇ ಸಾದಿಕ್ ಹಿಂದೆ ಸರಿದಿದ್ದಾರೆ. ಈಗಾಗಲೇ ನಾಮಪತ್ರ ಹಿಂಪಡೆಯುವ ಅವಕಾಶ್ ಮುಗಿದಿದ್ದರಿಂದ ಚುನಾವಣಾ ಕಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾದಿಕ್ ಪೈಲ್ವಾನ್, ಬಂಡಾಯ ಸ್ಪರ್ಧೆಯಿಂದ ನಾನು ನಿವೃತ್ತಿಯಾಗಿದ್ದೇನೆ. ಖಂಡಿತವಾಗಿಯೂ ಅಲ್ಪಸಂಖ್ಯಾತರು, ಅಹಿಂದ ವರ್ಗದ ಜನ ಭುಜಕ್ಕೆ ಭುಜ ಕೊಟ್ಟು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪುತ್ರನನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ನವನೇ. ನನ್ನ ಮನೆಗೆ ಬಂದಿದ್ದೇನೆ. ಮನೆಯಲ್ಲಿ ಅಣ್ಣ-ತಮ್ಮಂದಿರ ಮಧ್ಯೆ ಜಗಳವಾದರೆ ಹಿರಿಯರು ಬಗೆಹರಿಸುತ್ತಾರೆ. ಹಾಗೇ ಹಿರಿಯ ನಾಯಕರು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026