LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗವನ್ನು ಅಭಿವೃದ್ಧಿ ಕಡೆಗೆ ಕೊಂಡಯುವುದೇ ನನ್ನ ಗುರಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!

 

ಚಿತ್ರದುರ್ಗ: ಚಿತ್ರದುರ್ಗ ನಗರವನ್ನು ಅಭಿವೃದ್ಧಿ ನಗರವನ್ನಾಗಿ ಮಾಡಲು ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸಿ ಭೂಮಿ ಪೂಜೆಯನ್ನು ಮಾಡಲಾಗಿದೆ ಎಂದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ತಿಳಿಸಿದರು.

ನಗರದ ವಿವಿಧ ವಾರ್ಡುಗಳಲ್ಲಿ  ಭಾನುವಾರ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು  ಹಿಂದೆ ಚಿತ್ರದುರ್ಗ ಹೇಗೆ ಇತ್ತು ಅನ್ನುವುದು ಮುಖ್ಯ ಅಲ್ಲ, ಮುಂದೆ ಹೇಗೆ ಅಭಿವೃದ್ಧಿ ಕೆಲಸಗಳ ಮೂಲಕ ಚಿತ್ರದುರ್ಗ ಅಭಿವೃದ್ಧಿಯಾಗುತ್ತದೆ ಎಂಬುದು ಮುಖ್ಯ, ಹಾಗಾಗಿ ಚಿತ್ರದುರ್ಗ ನಗರದ ಎಲ್ಲಾ ವಾರ್ಡಗಳಲ್ಲಿ ಈಗಾಗಲೇ ಸಾಕಷ್ಟು ಭೂಮಿ ಪೂಜೆಗಳನ್ನು ಈ ಹಿಂದೆ ಮಾಡಲಾಗಿದೆ ಅದೇ ರೀತಿ ವಿವಿಧ ಇಲಾಖೆಗಳೊಂದಿಗೆ ಸೇರಿ ಅಭಿವೃದ್ಧಿ ಕೆಲಸಗಳಿಗೆ ಭೂಮಿ ಪೂಜೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಭೇಟಿ ನೀಡಿ ಭೂಮಿ ಪೂಜೆ ಮಾಡುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಕಾಮಗಾರಿಗಳು ಗುಣಮಟ್ಟದಿಂದ ಇರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅದೇ ರೀತಿಯಲ್ಲಿ ಅಧಿಕಾರಿಗಳು ಸಹ ಗ್ರಾಮೀಣ ಭಾಗಗಳಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚಿತ್ರದುರ್ಗ ನಗರದಲ್ಲಿ ಚಂದ್ರವಳ್ಳಿ ರಸ್ತೆಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಿರ್ಮಿತಿ ಕೇಂದ್ರ ಇಲಾಖೆ ವತಿಯಿಂದ ರಾಜ್ಯ ವಿಪತ್ತು ಉಪಶಮನ (ಡಿಎಂಎಫ್) ನಿಧಿಯಡಿ ರಾಜ ಕಾಲುವೆ ಅಭಿವೃದ್ಧಿ ಕಾಮಗಾರಿ,  ಬರಗೆರಮ್ಮ ದೇವಸ್ಥಾನದ ಸೇತುವೆ ಬಳಿ ರಾಜಕಾಲುವೆಗೆ ಸಿಸಿ ಡ್ರೈನ್ ಕಾಮಗಾರಿ, ಸಿಹಿ ನೀರು ಹೊಂಡದ ಅಭಿವೃದ್ಧಿ ಕಾಮಗಾರಿ, ಸಂತೆಹೊಂಡಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ, ತುರುವನೂರು ರಸ್ತೆಯಲ್ಲಿನ ವೆಂಕಟರಮಣ ಸ್ವಾಮಿ ದೇವಸ್ಥಾನದ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ, ಸ್ಟೇಡಿಯಂ ರಸ್ತೆಯನ ಒಂದನೇ ಕ್ರಾಸ್ ನಲ್ಲಿ ರಾಜ ಕಾಲುವೆ ಸಿಸಿ ಡ್ರೈನ್ ಕಾಮಗಾರಿಗಳ ಭೂಮಿ ಪೂಜೆಯನ್ನ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಅವರು ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷರಾದ ಮಂಜಪ್ಪ, ಸಿದ್ದವ್ವನಹಳ್ಳಿ ಪರಮೇಶಿ, ಬ್ಲಾಕ್ ಅಧ್ಯಕ್ಷ ಲಕ್ಷ್ಮೀಕಾಂತ ವೀರಶೈವ ಸಮಾಜದ ಮುಖಂಡ ಕಾರ್ತಿಕ್, ನಗರಸಭೆಯ ಮಾಜಿ ಸದಸ್ಯ ಶ್ರೀ ರಾಮ್,ಮರುಳಾರಾಧ್ಯ ಪ್ರಕಾಶ್, ನಗರಸಭಾ ಸದಸ್ಯರಾದ ಮಹಮ್ಮದ್ ಆಹಮ್ಮದ್ ಪಾಷ (ಸರ್ದಾರ್,) ಸೇರಿದಂತೆ ಇತರರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026