LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಕ್ರಿಯಾ ಯೋಜನೆ: ಜಿ.ಪಂ ಸಿಇಓ ಅವರಿಂದ ಇರಕಲಗಡ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆ....

ಕೊಪ್ಪಳ ಮಾರ್ಚ್ 11 : 2025-26ನೇ ಸಾಲಿನ ನರೇಗಾ ಕ್ರಿಯಾ ಯೋಜನೇಯಲ್ಲಿನ ಕಾಮಗಾರಿಗಳ ಅಳವಡಿಕೆಯ ಸ್ಥಳವನ್ನು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನo ಪಾಂಡೆಯ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಇರಕಲಗಡಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಾಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಕಾಂಪೌಂಡ್, ಯಲಮಗೇರಿ ಗ್ರಾಮದ ಚೆಕ್ ಡ್ಯಾಮ್ ಅಭಿವೃದ್ಧಿ, ಹನಮನಹಟ್ಟಿ ಗ್ರಾಮದ ಶಂಕ್ರಪ್ಪ ಇವರ ಮನೆ ಮುಂದೆಯ ಬಚ್ಚಲಗುಂಡಿ ಕಾಮಗಾರಿಗಳನ್ನು ಅನುಷ್ಠಾನಿಸಲು ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡಿರುವ ಪೂರ್ವ ಸ್ಥಳ ಪರಿಶೀಲಿಸಿದ ಸಿಇಓ ಅವರು, ಕಾಮಗಾರಿ ಅನುಷ್ಠಾನಿಸಲು ಸ್ಥಳ ಆಯ್ಕೆ ಹೇಗೆ ಮಾಡಿಕೊಂಡಿದ್ದಾರೆ ಮತ್ತು ಕಾಮಗಾರಿ ಅನುಷ್ಠಾನಿಸುವದು ಅವಶ್ಯಕತೆ ಇದೆಯೆ ಎಂಬುದರ ಬಗ್ಗೆ ವೀಕ್ಷಿಸಿದರು.

ನರೇಗಾ ಕಾಮಗಾರಿಗಳ ಪರಿಶೀಲನೆ: ಗ್ರಾಮ ಪಂಚಾಯತಿಯಿಂದ ಅನುಷ್ಠಾನಗೊಂಡ ಹನಮನಹಟ್ಟಿ ಗ್ರಾಮದ ಶಾಲಾ ಕಂಪೌಂಡ ಕಾಮಗಾರಿ, ಯಲಮಗೇರಿ ಗುಡ್ಡದಲ್ಲಿರುವ ಜಿನ್ನಾಪುರ ಹನಮಂತ ದೇವಸ್ಥಾನದ ಹತ್ತಿರ ಪ್ರಾದೇಶಿಕ ಅರಣ್ಯ ಇಲಾಖೆಯಿಂದ ಪ್ರಗತಿಯಲ್ಲಿರುವ ಮಣ್ಣು-ನೀರು ಸಂರಕ್ಷಣಾ ಕಾಮಗಾರಿ(ಎಸ್.ಎಂ.ಸಿ), ಸಾಮಾಜಿಕ ಅರಣ್ಯ ಇಲಾಖೆಯ ಸಂಘ-ಸAಸ್ಥೆಗಳಲ್ಲಿ ಸಸಿ ನೆಟ್ಟ ಕಾಮಗಾರಿ ಪರಿಶೀಲಿಸಿದರು.

ಪ್ರಾಥಮಿಕ ಶಾಲೆಗೆ ಭೇಟಿ: ಚಾಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಿಇಓ ಅವರು ಭೇಟಿ ನೀಡಿ, ಅಲ್ಲಿರುವ ಮಕ್ಕಳ ಕಲಿಕಾ ಮಟ್ಟ ವೀಕ್ಷಿಸಿದರು. ಮಕ್ಕಳಿಗೆ ಮೊಟ್ಟೆ, ಆಹಾರ ವಿತರಣೆ ಕುರಿತು ಮಕ್ಕಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಎಡಿಪಿಸಿ ಮಹಾಂತಸ್ವಾಮಿ, ಪಂಚಾಯತ ಅಭಿವೃದ್ದಿ ಅಧಿಕಾರಿ ಪರಮೇಶ್ವರಯ್ಯ ತೆಳಗಡೆಮಠ, ಟಿಸಿ ಯಮನೂರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಸಾಮಾಜಿಕ ಅರಣ್ಯ ಉಪ ವಲಯ ಅರಣ್ಯಾಧಿಕಾರಿ ಅಬ್ದು ಸಮಿ, ಪ್ರಾದೇಶಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಲಿಂಗರಾಜ ಕನ್ನಾಳ, ಗಸ್ತು ಅರಣ್ಯ ಪಾಲಕ ಸಂತೋಷ ಹಾವನೂರು, ಎಸ್.ಡಿ.ಎ.ಎ ರೇಣುಕಾ, ಟಿಎಇ ಮಲ್ಲಿಕಾರ್ಜುನ ಮೆಗಳಮನಿ, ತಾಂತ್ರಿಕ ಸಹಾಯಕಿ ನೇತ್ರಾವತಿ, ಸರಸ್ವತಿ, ಬೇರ್ ಫೂಟ್ ಟೆಕ್ನಿಷಿಯನ್ ರವಿಶಂಕರ ಪೂಜಾರ, ಕರವಸೂಲಿಗಾರ ಕೊಟ್ರೇಶ್ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು