LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಮಾನ್ಸ್ ಆಸ್ಪತ್ರೆ ಮನೋವೈದ್ಯಕೀಯದಲ್ಲಿ ಹಬ್ ಆಗು ಬೆಳೆದಿದೆ : ದಿನೇಶ್ ಗುಂಡೂರಾವ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತನ್ನ ಮೊದಲ ಅತ್ಯಾಧುನಿಕ ಸೌಲಭ್ಯವುಳ್ಳ ಮಾನಸಿಕ ಆರೋಗ್ಯ ಕೇಂದ್ರವಾದ ಸುಕೂನ್ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ಆರೋಗ್ಯ ರಕ್ಷಣೆಗೆ ಹೆಚ್ಚು ಹೊತ್ತು ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು.

ಉತ್ತರ ಬೆಂಗಳೂರಿನ ನ್ಯೂ ಬೆಲ್ ರೋಡ್ ನಲ್ಲಿರುವ ಸುಕುನ್ ನೂತನ ಮಾನಸಿಕ ಆರೋಗ್ಯ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿದವರು, ಬೆಂಗಳೂರಿನಲ್ಲಿ ನಾಲ್ಕನೇ ಹಾಸ್ಪಿನಲ್ ಯೂನಿಟ್‌ ಹೊಂದಿದೆ. ಭಾರತದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಯನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮಹತ್ವದ ದಾಪುಗಾಲು ಹಾಕುತ್ತಿದೆ. ದೆಹಲಿಯಲ್ಲಿ ಭಾರತದ ಮೊದಲ NAIBH ಒಳರೋಗಿಗಳ ಮನೋವೈದ್ಯಕೀಯ ಆಸ್ಪತ್ರೆಯನ್ನು ತೆರೆದಿರುವ ಸುಕೂನ್ ಹೆಲ್ತ್ ಇದೀಗ ಬೆಂಗಳೂರಿನಲ್ಲಿ ತನ್ನ ಮೊದಲ ಅತ್ಯಾಧುನಿಕ ಮಾನಸಿಕ ಆರೋಗ್ಯ ಸೌಲಭ್ಯವನ್ನು ಪ್ರಾರಂಭಿಸುವುದಾಗಿ ಘೋಷಿಸಿತು.

ನಿಮಾನ್ಸ್ ಸಂಸ್ಥೆ ಇಡೀ ಏಷ್ಯಾ ಖಂಡದಲ್ಲಿ ಮಾನಸಿಕ ಆರೋಗ್ಯ ಸಂಸ್ಥೆಯು ಹಬ್ ಆಗಿ ಬೆಳೆದಿದೆ, ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿನ ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದರು.

ಮಾನಸಿಕ ಆರೋಗ್ಯವನ್ನು ಹೆಚ್ಚಿಸುವ ಸಲುವಾಗಿ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತಿದೆ, ಸುಕೂನ್ ಹೆಲ್ತ್‌ನಲ್ಲಿ, ನಾವು ಕೇವಲ ಚೇತರಿಕೆಗೆ ಮಾತ್ರವಲ್ಲದೆ ನಮ್ಮ ರೋಗಿಗಳ ಒಟ್ಟಾರೆ ಯೋಗಕ್ಷೇಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸಮಗ್ರ ಆರೈಕೆ ಯೋಜನೆಗೆ ಒತ್ತು ನೀಡುತ್ತೇವೆ.

ಬೆಂಗಳೂರಿನ ಪ್ರಮುಖ ಮನೋವೈದ್ಯರಾದ ಡಾ.ಸತೀಶ್ ರಾಮಯ್ಯ ಅವರು ಮನೋವೈದ್ಯಕೀಯ ಸೇವೆಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮತ್ತು ಕೇಂದ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ. ರಾಮಯ್ಯ ಅವರು ತಮ್ಮ ಸಂಶೋಧನೆಗಳ ಮೂಲಕ ವ್ಯಸನ, ಕಲಿಕೆಯಲ್ಲಿ ಅಸಮರ್ಥತೆ ಮತ್ತು ನಿದ್ರಾಹೀನತೆಗಳ ಸಂಶೋಧನೆಯ ಮೂಲಕ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ, ಅವರ ಸಂಶೋಧನೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದರು.

ಸುಕೂನ್ ನಲ್ಲಿ ಸೌಲಭ್ಯಗಳ ವಿವರ

ಮನೋವೈದ್ಯಕೀಯ ಒಳರೋಗಿಗಳ ಆರೈಕೆಯನ್ನು ಬಯಸುವ ರೋಗಿಗಳಿಗೆ ಆರೋಗ್ಯವು ನಗದುರಹಿತ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಬೈಪೋಲಾರ್ ಡಿಸಾರ್ಡರ್, ತೀವ್ರವಾದ ಖಿನ್ನತೆ, ಆತಂಕದ ಅಸ್ವಸ್ಥತೆಗಳು, ಸ್ಕಿಜೋಫ್ರೇನಿಯಾ, ಮೂಡ್ ಡಿಸಾರ್ಡರ್, ಸೈಕೋಟಿಕ್ ಡಿಸಾರ್ಡರ್, ನಂತರದ ಆಘಾತಕಾರಿ ಒತ್ತಡದ ಅಸ್ವಸ್ಥತೆ, ಒಬ್ಸೆಸಿವ್-ಕಂಪಲ್ಸಿವ್ ಡಿಸಾರ್ಡರ್ಸ್ ಮತ್ತು ಗಮನ-ಕೊರತೆಯ ಹೈಪರ್ಆಕ್ಟಿವಿಟಿ ಡಿಸಾರ್ಡರ್ ಅನ್ನು ಒಳಗೊಂಡಿರುವ ಮಾನಸಿಕ ಆರೋಗ್ಯ ಪರಿಸ್ಥಿತಿಗಳು ಸೇರಿವೆ.

ಕಾರ್ಯಕ್ರಮದಲ್ಲಿ ಮಾನಸಿಕ ಹಿರಿಯ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು, ಸಂಸ್ಥೆಯ ಸಿಇಓ ಇದೇ ವೇಳೆ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ