LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!

 

ಮುಂಬೈ: ಬ್ಯಾಂಕುಗಳು ಸ್ಥಳೀಯ ಭಾಷೆ ಬಲ್ಲವರನ್ನು ನೇಮಕ ಮಾಡಿಕೊಳ್ಳಬೇಕು. ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದ ಮೇಲೆ ಅವರ ವೃತ್ತಿಪರತೆ ಅಳೆಯಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

12ನೇ ಎಸ್.ಬಿ.ಐ. ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಶಾಖೆಯಲ್ಲಿ ನೇಮಿಸಲಾದ ಎಲ್ಲಾ ಸಿಬ್ಬಂದಿಗೆ ಅಲ್ಲಿನ ಜನ ಮತ್ತು ಅವರು ಆಡುವ ಭಾಷೆಯನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯ ಇರಬೇಕು ಎಂದು ತಿಳಿಸಿದ್ದಾರೆ.

ಕನ್ನಡಿಗರು ಬ್ಯಾಂಕಿಗೆ ಹೋದಾಗ ಹಿಂದಿಯಲ್ಲಿ ಉತ್ತರಿಸುತ್ತಿದ್ದ ಹಲವು ಪ್ರಕರಣ ಬೆಳಕಿಗೆ ಬಂದಿದ್ದವು. ಕನ್ನಡ ಗ್ರಾಹಕರು ಬ್ಯಾಂಕ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದರು. ಸ್ಥಳೀಯ ಭಾಷೆ ಗೊತ್ತಿಲ್ಲದವರನ್ನು ಬ್ಯಾಂಕುಗಳಿಗೆ ನೇಮಿಸುತ್ತಿರುವ ಬಗ್ಗೆ ದಕ್ಷಿಣ ಭಾರತದ ಹಲವು ಕಡೆ ಆಕ್ರೋಶ ವ್ಯಕ್ತವಾಗಿತ್ತು. ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿ ಸ್ಥಳೀಯರ ನಡುವೆ ಜಟಾಪಟಿ ನಡೆದಿತ್ತು.

ಈಗ ಬ್ಯಾಂಕಿಂಗ್ ಸಮಾವೇಶದಲ್ಲಿ ಬ್ಯಾಂಕುಗಳಿಗೆ ಈ ಬಗ್ಗೆ ಕಿವಿ ಹಿಂಡಿ ಹೇಳಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬ್ಯಾಂಕಿನ ಉನ್ನತ ಅಧಿಕಾರಿಗಳಿಗೆ ಸ್ಥಳೀಯ ಭಾಷೆ ಗೊತ್ತಿಲ್ಲದಿದ್ದರೂ ಪರವಾಗಿಲ್ಲ. ಶಾಖೆಗಳಲ್ಲಿ ಇರುವವರಿಗೆ ಸ್ಥಳೀಯ ಭಾಷೆ ತಿಳಿದಿರಬೇಕು. ಸ್ಥಳೀಯ ಭಾಷೆ ಆಡುವವರನ್ನು ಬ್ಯಾಂಕ್ ಶಾಖೆಗಳ ಹುದ್ದೆಗಳಿಗೆ ನಿಯೋಜಿಸುವಂತೆ ಸೂಚಿಸಿದ್ದಾರೆ.

.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026