LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕ್ರೆಬೈಲಿನಲ್ಲಿ ಎರಡು ಮರಿಯಾನೆಗಳಿಗೆ ನಾಮಕರಣ*

ಶಿವಮೊಗ್ಗ, ಆ.12 : ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು.ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ ಮರಿಗಳಿಗೆ ಅಧಿಕಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಮರಿಗಳ ಕಿವಿಯಲ್ಲಿ ಹೆಸರನ್ನು ಹೇಳುವ ಮೂಲಕ ನಾಮಕರಣ ಮಾಡಿದರು.

ಸಕ್ರಬೈಲು ಆನೆಬಿಡಾರದಲ್ಲಿ ಜನಿಸಿದ ಎರಡು ಆನೆ ಮರಿಗಳು ಇವಾಗಿವೆ. ಅರಣ್ಯ ಇಲಾಖೆಯ ಸಿಸಿಎಫ್ ಹನುಮಂತಪ್ಪ ಹಾಗೂ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ನಾಮಕರಣ ಮಾಡಿದರು.ಭಾನುಮತಿಯ ಮರಿಗೆ ಚಾಮುಂಡಿ, ನೇತ್ರಾವತಿ ಮರಿಗೆ ತುಂಗಾ ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಲಾಯಿತು. ಆನೆಯ ಕಿವಿಗೆ ಮೂರುಬಾರಿ ಚಾಮುಂಡಿ ಹಾಗೂ ತುಂಗಾ ಎಂದು ಹೇಳುವ ಮೂಲಕ ನಾಮಕರಣ ಮಾಡಲಾಯಿತು. ಸಕ್ರೆಬೈಲಿನಲ್ಲಿ ನಾಮಕರಣದ ವಾತಾವರಣವನ್ನು ಸೃಷ್ಠಿಸಿದೆ.

ಈ ವೇಖೆ 23 ಆನೆಗಳಿಗೆ ಬಣ್ಣಗಳಿಂದ ಅಲಂಕಾರ ಮಾಡಲಾಗಿತ್ತು. ದಸರಾ ಆನೆಗಳಂತೆ ಸಕ್ರೆಬೈಲಿನ ಆನೆಗಳು ಕಂಗೊಳಿಸುತ್ತಿವೆ. ಅರ್ಜುನ, ಸಾಗರ, ಬಹದ್ದೂರು, ಆನೆಗಳ ಸಾಲಿನಲ್ಲಿ ನಿಲ್ಲಿಸಿ ಕಾಡಾನೆ ತುಂಗಾ ಮತ್ತು ಚಾಮುಂಡಿಗೆ ನಾಮಕರಣ ಮಾಡಲಾಯಿತು. ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ನಾಮಕರಣ ಮಾಡಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST