LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ 

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು 66/11 ಕೆ.ವಿ ಹರಿಯಬ್ಬೆ ಉಪ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ವರೆಗೆ ಹಾಲಿ ಇರುವ 9.628 ಕಿ.ಮೀ ಉದ್ದದ 66 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು, ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.

ಈ 66 ವಿದ್ಯುತ್ ಮಾರ್ಗವನ್ನು ಜುಲೈ 20ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಪ್ರದೇಶಗಳು: ಮ್ಯಾಕ್ಯೂರಹಳ್ಳಿ, ಬಬ್ಬೂರು, ಹೇಮದಳ, ಅಂಬಲಗೆರೆ, ಬಿದರಕೆರೆ, ಹರಿಯಬ್ಬೆ, ಶಿಡ್ಲಯ್ಯನಕೋಟೆ, ಕ್ಯಾತನಮಳೆ, ಗೊಲ್ಲರಹಟ್ಟಿ ಗೂಳ್ಯ, ರಂಗೇನಹಳ್ಳಿ ಮತ್ತು ಚಂದ್ರಗಿರಿ ಗೊಲ್ಲಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು