LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್ 26 ಸಂವಿಧಾನ ದಿನಾಚರಣೆ; ಜಾಗೃತಿ ಜಾಥಾ

 
===
ರಾಯಚೂರು ನವೆಂಬರ್ 25  ಭಾರತ ದೇಶದಾದ್ಯಂತ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಅದೆ ರೀತಿ ಕರ್ನಾಟಕ ರಾಜ್ಯದಲ್ಲಿಯು ಸಹ ಸಂವಿಧಾನ ದಿನಾಚರಣೆಯು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಲಾಗುತ್ತದೆ.
ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾಥಾವು ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮಹಾನಗರ ಪಾಲಿಕೆ ಆವರಣದಿಂದ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿ ಮಹಾತ್ಮಗಾಂಧಿ ವೃತ್ತ, ಮಹಾವೀರ ವೃತ್ತ, ತೀನ್ ಖಂದೀಲ್, ಎಕ್ ಮೀನಾರ್, ತಹಸೀಲ್ ಕಚೇರಿ, ಬಸ್ ನಿಲ್ದಾಣ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಂಚರಿಸಿ ಶ್ರೀ ಪಂಡಿತ ಸಿದ್ದರಾಮ ಜಂಬಲ್‌ದಿನ್ನಿ ರಂಗಮAದಿರವರೆಗೆ ಸಾಗಿ ಮುಕ್ತಾಯವಾಗಲಿದೆ.
ಜಾಥಾದಲ್ಲಿ ಸಂವಿಧಾನದ ಜಾಗೃತಿಯ ಪ್ಲೇ ಕಾರ್ಡ ಹಿಡಿದು, ಸಂವಿಧಾನ ಪುಸ್ತಕ, ರಾಷ್ಟçದ್ವಜ ಹಾಗೂ ಡಾ. ಬಿ.ಆರ್.ಅಂಬೇಡ್ಕರ ಅವರ ವೇಶ ಹಾಕಿದ ಯುವಕರಿಂದ ಜಾಥಾ ಆಯೋಜಿಸಲಾಗಿದೆ. ಆದಕಾರಣ ಎಲ್ಲ ನಾಗರಿಕರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಮುಖಂಡರು ಹಾಗೂ ಸದಸ್ಯರು ಸೇರಿದಂತೆ ಎಲ್ಲರು ಸಂವಿಧಾನ ದಿನಾಚರಣೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ಸಂವಿಧಾನ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು