Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎನ್.ಪಿ.ಎಸ್ ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ NPS cancellation- to be discussed in Cabinet meeting : ಮುಖ್ಯಮಂತ್ರಿ ಸಿದ್ದರಾಮಯ್ಯ

[video width="854" height="480" mp4="https://janajeevala.com/wp-content/uploads/2023/06/video_20230613_194927.mp4"][/video]

ಜನ ಜೀವಾಳ ಜಾಲ: ಬೆಂಗಳೂರು, ಜೂನ್ 13: ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.

ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಪ್ರಾಮಾಣಿಕವಾಗಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಮಾತನಾಡಿ, 1.4.2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಾಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒ.ಪಿ.ಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ವಿವರಿಸಿದರು.

ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.

ಮಾಜಿ ಸಚಿವ ವಿ.ಎಸ್.ಉಗ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆ.ಪಿ.ಟಿ.ಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*NPS cancellation- to be discussed in Cabinet meeting : Chief Minister Siddaramaiah*

Bengaluru, June 13: Chief Minister Siddaramaiah assured that discussion will be held regarding implementation of the old pension scheme in the cabinet and a decision will be taken to announce it in the budget.

He was speaking to the delegation of office bearers of NPS employees' union that met him today urging cancellation of New Pension Scheme.

The CM said that the employees should work efficiently to implement the guarantee schemes of the government, and said that they should sincerely work to reach the benefits of the government programs to the people.

Former MLC V.S.Ugrappa who spoke on the occasion informed that, 2.98 lakh employees are covered under NPS. The pension amount is deposited in NSDL. This amount can be deposited in GPF which can be made available at the time of retirement. He explained that the government should decide to drop the disciplinary action taken against those who took part in Vote for OPS campaign.

NPS has been cancelled in Rajasthan and Chhattisgarh, it should also be canceled in Karnataka and the old pension scheme should be implemented. By canceling NPS, a total of 19,000 crores is available under the scheme which can be used for development programs of the government. 9,000 crores of employees' share can be converted to GPF and 10,000 crores of government share can be used for development programs, Karnataka State NPS employees' union president Shantaram Teja explained.

Representatives of Primary School Teachers Association, KPTCL, Health, BWSSB, Revenue and other departments associations were present.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ