LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ.10 ರಂದು ಡಾ.ರಕ್ಷಿತ ಜಿ.ಪಿ.ಇವರು ಭರತನಾಟ್ಯ ರಂಗ ಪ್ರವೇಶ: ಡಾ. ನಂದಿನಿ ಶಿವಪ್ರಕಾಶ್

 

ಚಿತ್ರದುರ್ಗ : ಡಾ.ರಕ್ಷಿತ ಜಿ.ಪಿ.ಇವರು ಆ.10 ರಂದು ಭರತನಾಟ್ಯ ರಂಗ ಪ್ರವೇಶಿಸಲಿದ್ದಾರೆಂದು ಅಂಜನಾ ನೃತ್ಯ ಕಲಾ ಕೇಂದ್ರದ ವಿದುಷಿ ಡಾ. ನಂದಿನಿ ಶಿವಪ್ರಕಾಶ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಕಾಶ್ಮೂರ್ತಿ ನಳಿನಾಕ್ಷಿ ದಂಪತಿಗಳ ಪುತ್ರಿ ಡಾ.ರಕ್ಷಿತ ಸಾಧನೆಯ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕಾಗಿ ಭರತನಾಟ್ಯ ರಂಗ ಪ್ರವೇಶಿಸಲಿದ್ದಾರೆ. ಉದಯೋನ್ಮುಖ ಕಲಾವಿದೆಯಾಗಲು ಭರತನಾಟ್ಯ ಕಲೆಯಲ್ಲಿ ತನ್ನನ್ನು ತೊಡಸಿಕೊಂಡಿದ್ದಾರೆ. ಪ್ರತಿನಿತ್ಯವೂ ಬೆಳಿಗ್ಗೆ 5-30 ರಿಂದ ಹಾಗೂ ಸಂಜೆ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ. ಸತತವಾಗಿ ಆರು ತಿಂಗಳ ಕಾಲ ತಾಲೀಮು ನಡೆಸಿ ಈಗ ರಂಗ ಪ್ರವೇಶಿಸುತ್ತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು.

ಅಂದು ಸಂಜೆ ಐದು ಗಂಟೆಗೆ ಉಮಾಪತಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದ ಸಾನಿಧ್ಯವನ್ನು ಕಬೀರಾನಂದಾಶ್ರಮದ ಶಿವಲಿಂಗಾನಂದಸ್ವಾಮಿ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಭರತನಾಟ್ಯ ಹಾಗೂ ಕೂಚುಪಡಿ ನರ್ತಕರಾದ ಡಾ.ವಸಂತಕಿರಣ್, ವಿದ್ವಾನ್ ಜಿ.ಎಸ್.ನಾಗೇಶ್, ಮಾಜಿ ಶಾಸಕ ಎ.ವಿ.ಉಮಾಪತಿ ಇವರುಗಳು ಭರತನಾಟ್ಯ ರಂಗ ಪ್ರವೇಶದಲ್ಲಿ ಭಾಗವಹಿಸಲಿದ್ದಾರೆಂದರು.

ಡಾ.ರಕ್ಷಿತ ಮಾತನಾಡಿ ಎಂಟನೆ ವಯಸ್ಸಿನಿಂದಲೆ ಭರತ ನಾಟ್ಯ ಕಲಿಯಲು ಆರಂಭಿಸಿದ ನಾನು ಮೊದಲು ಸುಧಾಮೂರ್ತಿಯವರ ಬಳಿ ಕಲಿತೆ. ನಂತರ ಅಂಜನಾ ನೃತ್ಯ ಕಲಾ ಕೇಂದ್ರದಲ್ಲಿ ಭರತ ನಾಟ್ಯ ಕಲಿತು ಈಗ ರಂಗ ಪ್ರವೇಶಿಸುತ್ತಿದ್ದೇನೆ. ಇದು ನನಗೆ ಜೀವನದ ಪಾಠ ಹೇಳಿಕೊಟ್ಟಿದೆ. ಗಂಗೂಬಾಯಿ ಹಾನಗಲ್ ಮೈಸೂರು ವಿವಿ.ಯಿಂದ ಭರತನಾಟ್ಯದ ಬಗ್ಗೆ ವಿದ್ವತ್ಪೂರ್ವ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಶಿಕ್ಷಣ ಮತ್ತು ಭರತನಾಟ್ಯ ಎರಡನ್ನು ನಿಭಾಯಿಸಿದ್ದೇನೆಂದು ಹೆಮ್ಮೆಯಿಂದ ಹೇಳಿದರು.

ವಿದ್ವಾನ್ ಸಿ.ಆರ್.ಶಿವಪ್ರಕಾಶ್, ಪ್ರಕಾಶ್ಮೂರ್ತಿ, ನಳಿನಾಕ್ಷಿ ದಂಪತಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026