Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅ.4 ರಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇ ಬಾಗೇವಾಡಿಯ ನೂತನ ಆವರಣದಲ್ಲಿ ನೂತನ ಆವರಣ ಕಟ್ಟಡಗಳು, ಸಂಶೋಧನಾ ಕೇಂದ್ರ ಮತ್ತು ರಸ್ತೆ ಶಂಕುಸ್ಥಾಪನೆ ಕಾರ್ಯಕ್ರಮ

ಬೆಳಗಾವಿ : ಹಿರೇ ಬಾಗೇವಾಡಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇ ಬಾಗೇವಾಡಿಯ ನೂತನ ಆವರಣದಲ್ಲಿ ಶಿಲಾನ್ಯಾಸ ಸಮಾರಂಭ – ನೂತನ ಆವರಣ ಕಟ್ಟಡಗಳು, ಸಂಶೋಧನಾ ಕೇಂದ್ರ ಮತ್ತು ರಸ್ತೆ ಶಂಕು ಸ್ಥಾಪನೆ ಕಾರ್ಯಕ್ರಮ ಅ.4 ರ ಬೆಳಿಗ್ಗೆ 11.30 ಗಂಟೆಗೆ ಬಿಮ್ಸ್ ಸಿವಿಲ್ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಸೆಂಟರ್ ಆವರಣದಲ್ಲಿ ನಡೆಯಲಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಿರೇಬಾಗೇವಾಡಿ ಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಆವರಣದಲ್ಲಿ ಶಿಲಾನ್ಯಾಸ ಸಮಾರಂಭವನ್ನು ನೆರವೇರಿಸಲಿದ್ದಾರೆ.

ಈ ಸಮಾರಂಭವು ಮಲ್ಟಿ-ಡಿಸಿಪ್ಲಿನರಿ ಎಜುಕೇಶನ್ & ರಿಸರ್ಚ್ ಯೂನಿವರ್ಸಿಟಿ (MERU) ಯೋಜನೆಯ ಅಡಿಯಲ್ಲಿ ವಿವಿಧ ಪ್ರಮುಖ ಕಟ್ಟಡ ಕಾಮಗಾರಿಗಳ ಪ್ರಾರಂಭವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ 100 ಕೋಟಿ ರೂಪಾಯಿಗಳ ಅನುದಾನದಲ್ಲಿ ನಡೆಯುತ್ತಿದೆ.

ಕಾಮಗಾರಿಗಳ ವಿವರ:

ಕೇಂದ್ರೀಯ ಸಂಶೋಧನಾ ಕೇಂದ್ರ (Central Research Center), ಕಿತ್ತೂರು ರಾಣಿ ಚೆನ್ನಮ್ಮ ಅಧ್ಯಯನ ಪೀಠ, ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ, ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠ, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅಧ್ಯಯನ ಪೀಠ, ಕನ್ನಡ, ಇಂಗ್ಲಿಷ್ ಮತ್ತು ಇತರೆ ಭಾಷೆಗಳ ಅಧ್ಯಯನಕ್ಕೆ “School of Languages” ಕಟ್ಟಡ ಸೇರಿದಂತೆ ಒಟ್ಟು ಅನುದಾನದಲ್ಲಿ 68 ಕೋಟಿ ರೂ. ಕಟ್ಟಡ ನಿರ್ಮಾಣಕ್ಕೆ, ಉಳಿದ 32 ಕೋಟಿ ರೂ. ವೈಜ್ಞಾನಿಕ ಉಪಕರಣಗಳು ಮತ್ತು ಸಂಶೋಧನಾ ಸಾಧನಗಳ ಖರೀದಿಗೆ ಮೀಸಲಾಗಿವೆ.

ಅಭಿವೃದ್ಧಿಯ ಗುರಿಗಳು:

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ಕೃಷ್ಟತೆಯನ್ನು ಉತ್ತೇಜಿಸುವುದು, NAAC ಮತ್ತು NIRF ರ್ಯಾಂಕಿಂಗ್‌ನಲ್ಲಿ ಉತ್ತಮ ಸ್ಥಾನ ಗಳಿಸುವುದು, ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 1,65,000 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉನ್ನತಿಗೆ ನೆರವಾಗುವುದು, ಸೈನ್ಸ್ ಸಿಟಿ ಮಾದರಿಯಲ್ಲಿ ಮಾದರಿ ಎಜುಕೇಶನ್ ಹಬ್ ರೂಪಿಸುವುದು, IIT ಧಾರವಾಡ, IIIT ಧಾರವಾಡ, ಕರ್ನಾಟಕ ಕೃಷಿ ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಮತ್ತು ಉತ್ತರ ಕರ್ನಾಟಕದ ಇತರೆ ವಿಶ್ವವಿದ್ಯಾಲಯ ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಕಾರ ವೃದ್ಧಿಸುವುದು.

ಇದರ ಜೊತೆಗೆ, ನೂತನ ಆವರಣಕ್ಕೆ ಶಾಶ್ವತ ಸಂಪರ್ಕ ಕಲ್ಪಿಸಲು, ರಾಷ್ಟ್ರೀಯ ಹೆದ್ದಾರಿಯಿಂದ RCU ಆವರಣಕ್ಕೆ 9.5 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗುವುದು. ಇದಕ್ಕೆ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹಕಾರ ಮತ್ತು ವಿಶೇಷ ಕಾಳಜಿಯಿಂದ ಅನುದಾನ ಮಂಜೂರಾಗಿದ್ದು, ಸದರಿ ಕಾಮಗಾರಿಯ ಶಂಕುಸ್ಥಾಪನೆಯನ್ನು ಮುಖ್ಯ ಮಂತ್ರಿ

ಮತ್ತು ಉಪಮುಖ್ಯಮಂತ್ರಿ ನೆರವೇರಿಸಲಿದ್ದಾರೆ.

ಉನ್ನತ ಶಿಕ್ಷಣ ಸಚಿವರು, ಜಿಲ್ಲೆಯ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ ತ್ಯಾಗರಾಜ್ ಇವರು ಮತ್ತು ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ