ಪಂಚಮಸಾಲಿ ಸಮುದಾಯ: ಪೊಲೀಸರು ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ.!
ಚಿತ್ರದುರ್ಗ : ಪಂಚಮಸಾಲಿ ಸಮುದಾಯಕ್ಕೆ 2 ಎ.ಮೀಸಲಾತಿ ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ವೀರಶೈವ ಲಿಂಗಾಯಿತ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಲಿಂಗಾಯಿತ ವಿರೋಧಿ ರಾಜ್ಯದ ಮುಖ್ಯಮಂತ್ರಿಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ.ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತಿರುವವರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಕೂಡಲೆ ಸೇವೆಯಿಂದ ಅಮಾನತ್ತುಗೊಳಿಸಬೇಕು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಸರ್ಕಾರ ನಮ್ಮ ಚಳುವಳಿಯನ್ನು ಹತ್ತಿಕ್ಕಲು ಅವಕಾಶ ಕೊಡುವುದಿಲ್ಲ. ಪ್ರತಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೊಲೀಸರ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು.
ಎಸ್.ಟಿ.ನವೀನ್ಕುಮಾರ್, ಪಿ.ಎಂ.ಸಿದ್ದಪ್ಪ, ರುದ್ರೇಶ್ ಐಗಳ್, ಎಂ.ಶಶಿಧರ್ಬಾಬು, ಜಿ.ಸಿ.ತಿಪ್ಪಣ್ಣ, ಮಹಂತೇಶ್, ಎಸ್.ಪರಮೇಶ್, ಹೆಚ್.ಎಂ.ಮಂಜುನಾಥ್ ದಾಳಿಂಬೆ
ಕಾರ್ತಿಕ್, ತಿಪ್ಪೇಸ್ವಾಮಿ, ಜಾಲಿಕಟ್ಟೆ ರುದ್ರಣ್ಣ, ಶಿವಾನಂದ್, ಪ್ರವೀಣ್, ನಿರ್ಮಲ ಬಸವರಾಜ್, ರೀನ ವೀರಭದ್ರಪ್ಪ, ಶಿವಪ್ರಕಾಶ್, ಮನು ತಮಟಕಲ್ಲು, ಶಿವರಾಜ್, ಉಮಾ ರಮೇಶ್, ಶೈಲಾ ಕಲ್ಲೇಶ್, ಶ್ರೀದೇವಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.