LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯ – ಎಂ.ಎಸ್.‌ ರಕ್ಷಾ ರಾಮಯ್ಯ ಕಿಡಿ

ನವದೆಹಲಿ (ಜಂತರ್ ಮಂತರ್); ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಸರ್ಕಾರ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಆರ್.‌ ಸೀತಾರಾಂ, ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಭಾಗವಹಿಸಿದ್ದರು.

ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಎಸ್.‌ ರಕ್ಷಾ ರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ವ್ಯಾಪಕ ಅನ್ಯಾಯವಾಗುತ್ತಿದೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆರಿಗೆ ಪಾಲು ಗಣನೀಯವಾಗಿ ಕಡಿತವಾಗಿದೆ. ಕೇಂದ್ರದಿಂದ ನಮಗೇ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಇಂತಹ ತಾರತಮ್ಯ ನೀತಿ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಾ ಗಾಂಧೀಜಿ ನೇತೃತ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಮಾದರಿಯಲ್ಲಿ ನಮ್ಮ ಹೋರಾಟ ತೀವ್ರಗೊಳಿಸುತ್ತೇವೆ. ನಮಗೆ ನ್ಯಾಯ ಸಿಗುವವರೆಗೆ ನಾವು ವಿರಮಿಸುವುದಿಲ್ಲ. ಕರ್ನಾಟಕದಿಂದ ಸಿಗುವ ಶೇ 100 ರಷ್ಟು ತೆರಿಗೆಯಲ್ಲಿ ನಮಗೆ ಕೇವಲ ಶೇ 12 ರಿಂದ 13 ರಷ್ಟು ಮಾತ್ರ ಪಾಲು ದೊರೆಯುತ್ತಿದೆ. ಇಂತಹ ಅನ್ಯಾಯ ಹಿಂದೆಂದೂ ಆಗಿರಲ್ಲ. ಮುಖ್ಯಮಂತ್ರಿಯೊಬ್ಬರು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದರೂ ಸಹ ಅವರ ಅಹವಾಲು ಆಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಎಂ.ಎಸ್.‌ ರಕ್ಷಾ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛ