Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ಅಮಿತ್ ಶಾಗೆ ರಾಹುಲ್ ಪತ್ರ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರಮವನ್ನು "ಅಮಾನವೀಯ ಮತ್ತು ಕ್ರೂರ ದಾಳಿ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.

 ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಜುಲೈ 25ರಂದು ಸುದೀರ್ಘ ಪತ್ರ ಬರೆದಿರುವ ಅವರುಘಟನೆಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪತ್ರದಲ್ಲೇನಿದೆಪ್ರಮುಖ ಮುಖ್ಯಾಂಶಗಳು:
ಅತಿಯಾದ ಬಲಪ್ರಯೋಗ:
ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕೇವಲ ನ್ಯಾಯಸಮ್ಮತ ಮತ್ತು ಉತ್ತರದಾಯಿತ್ವ ಹೊಂದಿರುವ ಶಿಕ್ಷಣ ವ್ಯವಸ್ಥೆಯನ್ನು ನೀಡುವಂತೆ ಒತ್ತಾಯಿಸುತ್ತಿದ್ದರು. ಆದರೆಅವರ ಧ್ವನಿಯನ್ನು ಆಲಿಸುವ ಬದಲು ಭದ್ರತಾ ಪಡೆಗಳು ಅಶ್ರುವಾಯು ಹಾಗೂ ಮಾರಕ ಶಸ್ತ್ರಾಸ್ತ್ರಗಳನ್ನು ಬಳಸಿ ಅತಿಯಾದ ಬಲಪ್ರಯೋಗ ನಡೆಸಿವೆ ಎಂದು ರಾಹುಲ್ ಗಾಂಧಿ ಆಪಾದಿಸಿದ್ದಾರೆ.

ಮಹಿಳಾ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ:
ಪೊಲೀಸರ ಹಲ್ಲೆಯಿಂದ ನೂರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲೂ ಮಹಿಳಾ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡುಅವರ ಖಾಸಗಿ ಅಂಗಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹಲ್ಲೆ ನಡೆಸಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

 ಪೆಲೆಟ್ ಗನ್ ಬಳಕೆ ಹಾಗೂ ಆಘಾತಕಾರಿ ಘಟನೆ:
ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್‌ಗಳನ್ನು ಬಳಸಿರುವುದು ಆಘಾತಕಾರಿ ಎಂದಿರುವ ಅವರುಈ ದಾಳಿಯಲ್ಲಿ 19 ವರ್ಷದ ಸಾಹಿಲ್ ಲೋಛಾಬ್ ಎಂಬ ವಿದ್ಯಾರ್ಥಿಯ ಕಣ್ಣಿಗೆ ಗಂಭೀರ ಗಾಯವಾಗಿದ್ದುಆತ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾನೆ ಎಂದು ತಿಳಿಸಿದ್ದಾರೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ದೃಶ್ಯಗಳ ಪ್ರಕಾರಪತ್ರಕರ್ತರು ಸೇರಿದಂತೆ ಹಲವರು ಗಂಭೀರ ಗಾಯಗೊಂಡಿರುವುದು ಕಂಡುಬಂದಿದೆ.

ಗೃಹ ಸಚಿವರಿಗೆ ರಾಹುಲ್ ಗಾಂಧಿ ನೆಟ್ಟ ನೇರ ಪ್ರಶ್ನೆಗಳು:
ಅನುಮೋದನೆ ಯಾರದ್ದು?: ದೆಹಲಿ ಪೊಲೀಸ್ ಪಡೆ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಸೇರಿದಂತೆ ಮಾರಕ ಬಲಪ್ರಯೋಗಕ್ಕೆ ಗೃಹ ಸಚಿವರಾಗಿ ನೀವು ಅನುಮೋದನೆ ನೀಡಿದ್ದೀರಾಇಲ್ಲವಾದಲ್ಲಿ ಈ ನಿರ್ಧಾರಕ್ಕೆ ಅನುಮತಿ ನೀಡಿದವರು ಯಾರು?.

ಸಿವಿಲ್ ಡ್ರೆಸ್ನಲ್ಲಿದ್ದ ವ್ಯಕ್ತಿಗಳು ಯಾರು?: ಸಾಧಾರಣ ಬಟ್ಟೆಯಲ್ಲಿ (ಸಿವಿಲ್ ಡ್ರೆಸ್) ಲಾಠಿ ಹಿಡಿದು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರು ನಿಜಕ್ಕೂ ಪೊಲೀಸ್ ಸಿಬ್ಬಂದಿಯೇ ಅಥವಾ ಖಾಸಗಿ ಸ್ವಯಂಸೇವಕರೇಇವರನ್ನು ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲು ಯಾರು ಅನುಮತಿ ನೀಡಿದ್ದರು?

 ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಈ ದೌರ್ಜನ್ಯಕ್ಕೆ ಸಂಪೂರ್ಣ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ