LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ಕೆರೆಗಳಲ್ಲಿ ಸ್ವಚ್ಛತಾ ಅಭಿಯಾನದ ಕಾರ್ಯ ಚುರುಕು: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 8 ಕೆರೆಗಳಲ್ಲಿ ಇಂದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಹಂತ-ಹಂತವಾಗಿ ಎಲ್ಲಾ ಕೆರೆಗಳಲ್ಲೂ ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ವಿಶೇಷ ಆಯುಕ್ತರಾದ(ಅ.ಪ.ಹ.ವೈ) ಪ್ರೀತಿ ಗೆಹ್ಲೋಟ್ ರವರು ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಬಿಬಿಎಂಪಿಯ ವ್ಯಾಪ್ತಿಯ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದ್ದು, ಅಮೃತಹಳ್ಳಿ, ಕೌದೇನಹಳ್ಳಿ ಹಾಗೂ ಕೆಳಗಿನ ಭೈರಸಂದ್ರ ಕೆರೆಗಳಿಗೆ ಖುದ್ದು ಭೇಟಿ ನೀಡಿ, ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳಿಗೆ ಸೂಚೆನೆ ನೀಡಿದ್ದಾರೆ.

ಎಲ್ಲಾ ಕರೆಗಳಲ್ಲಿ ಬರುವ ಕರೆಯ ಅಂಗಳದ ಪಾದಚಾರಿ ಮಾರ್ಗದಲ್ಲಿ ಸ್ವಚ್ಛತೆ, ಕೆರೆ ಏರಿಯಾದಲ್ಲಿ ಕಳೆ ತೆಗೆಯುವುದು, ಕೆರೆ ನೀರಿನಲ್ಲಿ ಜೊಂಡು ತೆಗೆಯುವುದು, ಒಳಹರಿವು ಸ್ವಚ್ಛತೆಗೊಳಿಸುವ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.

ಸ್ವಚ್ಛತಾ ಅಭಿಯಾನವು ಈ ವಾರ ಪೂರ್ತಿ ನಡೆಯಲಿದ್ದು, ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಸರಿಯಾಗಿ ಸ್ವಚ್ಛತೆ ಮಾಡಲು ಸೂಚಿಸಿದರು.

ಬಿಬಿಎಂಪಿ ವ್ಯಾಪ್ತಿಯ  8 ಕರೆಗಳಲ್ಲಿ ಸ್ವಚ್ಛತೆ:

ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳಲ್ಲೂ ಒಂದೊಂದು ಕೆರೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಅದರಂತೆ ಇಂದು ಕೆಳಗಿನ ಬೈರಸಂದ್ರ, ನಾಯಂಡನಹಳ್ಳಿ, ಗೌಡನಪಾಳ್ಯ, ಕೌದೇನಹಳ್ಳಿ, ದೊರೆಕೆರೆ, ಅಗರ, ಅಮೃತಹಳ್ಳಿ, ಚೊಕ್ಕಸಂದ್ರ ಹಾಗೂ ಉಲ್ಲಾಳ ಕರೆ ಸೇರಿದಂತೆ 8 ಕೆರೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿದೆ. ಅದಕ್ಕಾಗಿ 175 ಸಿಬ್ಬಂದಿ, 13 ಟ್ರ್ಯಾಕ್ಟರ್ ಹಾಗೂ 4 ಜೆ,ಸಿ.ಬಿಗಳನ್ನು ಬಳಸಿಕೊಳ್ಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ