LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಪತ್ರಿಕಾ ದಿನಾಚರಣೆ............ ಬಳ್ಳಾರಿ ಜಿಲ್ಲೆಯ ಪತ್ರಿಕೋದ್ಯಮಕ್ಕೆ ದೊಡ್ಡ ಐತಿಹ್ಯವಿದೆ

ಬಳ್ಳಾರಿ
ಜೆಟಿ ಫೌಂಡೇಶನ್ , ಶ್ರೀ ಲಕ್ಷ್ಮಿ ವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ಜೋಳದರಾಶಿ ಹಾಗೂ ಬಳ್ಳಾರಿ ಪತ್ರಕರ್ತರ ಸಹಯೋಗದಲ್ಲಿ ಇಲ್ಲಿನ ಬಿಡಿಎಎ ಮೈದಾನ ಸಭಾಂಗಣದಲ್ಲಿ
ಸೋಮವಾರ ಪತ್ರಿಕಾ ದಿನಾಚರಣೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್
ಬಂಡಾರು ಅವರು ಸಮಾರಂಭಕ್ಕೆ ಶುಭ ಹಾರೈಸಿದರು.



ವಿಶೇಷ ಉಪನ್ಯಾಸ ನೀಡಿದ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ
ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಗಿ ಅವರು, ಪತ್ರಿಕೋದ್ಯಮ ಮಹತ್ವ ಹಾಗೂ ಸದ್ಯದ
ಸ್ಥಿತಿಗತಿಗಳು ಕುರಿತು ಮಾತನಾಡಿರು.



ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಬಳ್ಳಾರಿಯಿಂದ ಕನ್ನಡ ಸಮಾಚಾರವಾಗಿ
ಮುದ್ರಣಗೊಂಡು ಓದುಗರಿಗೆ ತಲುಪುತ್ತಿತ್ತು. ಕನ್ನಡ ಪತ್ರಿಕೋದ್ಯಮ ಎಂದ ಕೂಡಲೇ
ಪತ್ರಿಕೋದ್ಯಮಕ್ಕೂ ಹಾಗೂ ಬಳ್ಳಾರಿಗೆ ನಂಟು ಬೆಸೆದುಕೊಳ್ಳುತ್ತದೆ. ಅಂಥಹದೊಂದು
ಬಹುದೊಡ್ಡ ಹಿನ್ನಲೆ ಬಳ್ಳಾರಿ ಪತ್ರಿಕೋದ್ಯಮಕ್ಕಿದೆ ಎಂದರು.

ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು, ಸಮಾಜವನ್ನು ಕಟ್ಟುವ ಕೆಲಸ
ಮಾಡಬೇಕು. ನ್ಯಾಯಸಮ್ಮತವಾದ, ಪಾರದರ್ಶಕವಾದ ಹಾಗೂ ನಿಖರವಾದ ಮಾಹಿತಿಯನ್ನು ಓದುರರಿಗೆನೀಡುವುದು ಮಾಧ್ಯಮದ ಹೊಣೆಗಾರಿಕೆಯಾಗಿದೆ. ಸಮಾಜಮುಖಿಯಾದಹೊಣೆಗಾರಿಕೆಯನ್ನುನಾಡಿನಅನೇಕಮಾಧ್ಯಮಗಳುನಿರ್ವಹಿಸುತ್ತಿವೆ.ಹೀಗಾಗಿ ಅನೇಕ ಪ್ರಕರಣಗಳು ಬೆಳಕಿಗೆಬರುತ್ತಿವೆ. ಜನಪರವಾದ ಆಶಯಗಳ ಹೊತ್ತು ಪತ್ರಕರ್ತರುಕಾರ್ಯನಿರ್ವಹಿಸುತ್ತಿರುವುದರಿಂದಾಗಿಯೇ ಸಂವಿಧಾನದ ನಾಲ್ಕನೇ ಅಂಗಎನಿಸಿದಪತ್ರಿಕಾರಂಗ ಇಂದಿಗೂ ಬಲವಾಗಿದೆ ಎಂದು ಹೇಳಿದರು.

 ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪತ್ರಿಕೆಗಳನ್ನು ಓದಬೇಕು. ಪತ್ರಿಕೆಗಳಲ್ಲಿ
ಮಾಹಿತಿಯನ್ನು ಸಂಗ್ರಹಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಪತ್ರಿಕೆ
ಓದು ಬಹಳ ಮುಖ್ಯ.

ತರಗತಿ ಕೋಣೆಯಲ್ಲಿ ಬರೀ ಸಿಲಬಸ್‌ ಓದಿದರೆ ಸಾಲದು. ಸಾಮಾನ್ಯ ಜ್ಞಾನಕ್ಕಾಗಿ
ಪತ್ರಿಕೆಗಳ ಓದು ಬಹಳ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.



ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಚಿತ್ರದುರ್ಗದ ಹಿರಿಯ ಕನ್ನಡಪ್ರಭ
ವರದಿಗಾರ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಅವರು ಮಾತನಾಡಿ, ಪತ್ರಕರ್ತ ಬರೀ ವರದಿ
ಮಾಡಿದರೆ ಸಾಲದು. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಮಸ್ಯೆಗಳಿಗೆ
ಧ್ವನಿಯಾಗಬೇಕು. ಜನಪರ ಚಳುವಳಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು ಎಂದು
ಹೇಳಿದರು.

ಹಿರಿಯ ಪತ್ರಕರ್ತರಾದ ನಂಜುಂಡೇಗೌಡ ಹಾಗೂ ಶಿವಮೊಗ್ಗದ ಹಿರಿಯ ಪತ್ರಕರ್ತ ಮಾರ್ಕ್ಸ್
ತೇಜಸ್ವಿ ಮಾತನಾಡಿದರು.

ರಾಯಚೂರು ಜಿಲ್ಲೆಯ ವೀರಗೋಟಮಠದ ಶ್ರೀ ಅಡವಿಲಿಂಗ ಮಹಾರಾಜಸ್ವಾಮಿ, ಆಂಧ್ರಪ್ರದೇಶಪಾಲ್ತೂರುಮಠದ ಚೆನ್ನವೀರ ಶಿವಾಚಾರ್ಯ ಸ್ವಾಮಿ, ಹರಗಿನಡೋಣಿ ಪುರವರ್ಗಮಠದ ಶ್ರೀಶಂಭುಲಿಂಗ ಶಿವಾಚಾರ್ಯಸ್ವಾಮಿ, ಡಿ.ನಾಗೇನಹಳ್ಳಿ ಶ್ರೀ ಚಾಮರಾಜ ಶ್ರೀ ಗಳು ಸಾನ್ನಿಧ್ಯವಹಿಸಿ ಮಾತನಾಡಿದರು. ಜೆ.ಟಿ.ಫೌಂಡೇಶ್ ನ ಮುಖ್ಯಸ್ಥ ತಿಮ್ಮಪ್ಪ ಜೋಳದರಾಶಿಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಪತ್ರಕರ್ತ ಮತ್ತಿಹಳ್ಳಿ ಅಹಿರಾಜ್ ಅತಿಥಿಗಳಾಗಿಭಾಗವಹಿಸಿದ್ದರು. ದೊಡ್ಡಬಸವ ಗವಾಯಿ ಡಿ.ಕಗ್ಗಲ್ ಕನ್ನಡಗೀತೆಗಳನ್ನು
ಪ್ರಸ್ತುತಪಡಿಸಿದರು. ಎಂ.ವಿನೋದ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ
ಬಳ್ಳಾರಿ ಜಿಲ್ಲೆಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು