LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿ

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಮೆರಿಕ ಪ್ರವಾಸದ ಮೊದಲ ದಿನದಲ್ಲಿ, ಹೊಸದಾಗಿ ಆಯ್ಕೆಯಾದ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾದರು.

ಬುಧವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದ ಪ್ರಧಾನಿ, ಅವರು ಗುಪ್ತಚರ ಕ್ಷೇತ್ರದಲ್ಲಿ ಅಮೇರಿಕಾದ ಪ್ರಮುಖ ನಾಯಕಿಯಾಗಿ ನೇಮಕಗೊಂಡ ತುಳಸಿ ಗಬ್ಬಾರ್ಡ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ, ತಮ್ಮ ಎಕ್ಸ್‌ಖಾತೆಯಲ್ಲಿ, ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರೊಂದಿಗೆ ಭಾರತದ-ಅಮೆರಿಕದ ಸಂಬಂಧದ ಬಗ್ಗೆ ಚರ್ಚೆ ಮಾಡಿದೆ. ಭಾರತ-ಯುಎಸ್ ಸ್ನೇಹ ಸದಾ ಬಲವತ್ತಾಗುತ್ತಿದೆ," ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಮೆರಿಕ ಪ್ರವಾಸದ ಸಂದರ್ಭದಲ್ಲಿ, ಭಾರತದ ಅನಿವಾಸಿ ಸಮುದಾಯವು ಮೋದಿ ಅವರಿಗೆ ಅದ್ದೂರಿ ಸ್ವಾಗತವನ್ನು ನೀಡಿತು. "ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ, ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ವಲಸಿಗರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು," ಎಂದು ಮೋದಿ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ಈ ಪ್ರವಾಸವು, ಭಾರತ-ಅಮೆರಿಕ ನಡುವೆ ಆಳವಾದ ಸ್ನೇಹ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತಕಳೆದ ತಿಂಗಳು ಗುಜರಿ ಮಾರಿ 800 ಕೋಟಿ ರೂಪಾಯಿ ಗಳಿಸಿದ ಕೇಂದ್ರ!ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?ಹಿರೆಮದಕರಿನಾಯಕರ ಧರ್ಮಪತ್ನಿ ಗಂಡೋಬಳವ್ವ ನಾಗತಿ ಅವರ ಚಿತ್ರ ಅನಾವರಣ.!ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯRSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್